ನವದೆಹಲಿ: ಬಿಜೆಪಿ ಮುಖಂಡನೊಬ್ಬ ಕಾನ್ಪುರದ ಪೊಲೀಸ್ ಅಧಿಕಾರಿಗೆ ಜೀವ ಬೆದರಿಕೆ ಹಾಕಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮುಖಂಡ ಸುರೇಶ್ ಅವಾಸ್ತಿ, 'ನಾನು ನಿನ್ನನ್ನು ನೋಡ್ಕೊಳ್ತಿನಿ. ನೀನು ನನ್ನ ಹಿಟ್ ಲಿಸ್ಟ್ನಲ್ಲಿದ್ದೀಯಾ' ಎಂದು ಪೊಲೀಸ್ ಅಧಿಕಾರಿಗೆ ಬೆದರಿಕೆಯೊಡ್ಡಿದ್ದಾರೆ.
ಮೇಯರ್ ಪ್ರಮೀಳಾ ಪಾಂಡೆ ಅವರು ಸಮಾಧಾನ ಪಡಿಸಿದರೂ ಅವರ ಎದುರೇ ಬಿಜೆಪಿ ಮುಖಂಡ ದರ್ಪ ಮೆರೆದಿದ್ದಾರೆ.
ಅವಾಸ್ತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.