ADVERTISEMENT

ಟ್ರ್ಯಾಕ್ಟರ್ ಅಪಘಾತ: ಠಾಣಾಧಿಕಾರಿ ಅಮಾನತು

ಪಿಟಿಐ
Published 2 ಅಕ್ಟೋಬರ್ 2022, 11:37 IST
Last Updated 2 ಅಕ್ಟೋಬರ್ 2022, 11:37 IST
   

ಕಾನ್ಪುರ(ಉತ್ತರ ಪ್ರದೇಶ): ಇಲ್ಲಿನ ಭದೆಯುನ ಗ್ರಾಮದ ಬಳಿ ಟ್ರ್ಯಾಕ್ಟರ್‌ ಟ್ರಾಲಿಯೊಂದು ಶನಿವಾರ ಕೆರೆಗೆ ಉರುಳಿ ಬಿದ್ದು 26 ಮಂದಿ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಠಾಣಾಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತ ನಡೆದ ಸ್ಥಳದಿಂದ ಒಂದು ಕಿ.ಮೀ ದೂರದಲ್ಲಿರುವ ಸಾಧ್‌ ಪೊಲೀಸ್‌ ಠಾಣೆಯ ಠಾಣಾಧಿಕಾರಿ ಒಂದು ಗಂಟೆಯ ಬಳಿಕ ಸ್ಥಳಕ್ಕೆ ತಲುಪಿದ್ದಾರೆ ಈ ಕಾರಣಕ್ಕೆ ಅವರನ್ನು ಅಮಾನತು ಮಾಡಲಾಗಿದೆ ಎಂದಿದ್ದಾರೆ.

ಚಂದ್ರಿಕಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಟ್ರ್ಯಾಕ್ಟರ್‌ ಪ್ರಯಾಣಿಕರು ಬಳಿಕ ಘಟಂಪುರ್‌ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.