ADVERTISEMENT

ಅತಿಕ್ರಮ ಪ್ರವೇಶ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ

ಪಿಟಿಐ
Published 26 ನವೆಂಬರ್ 2020, 12:20 IST
Last Updated 26 ನವೆಂಬರ್ 2020, 12:20 IST
ನ.24ರಂದು ಉಸ್ಮಾನಿಯಾ ವಿಶ್ವವಿದ್ಯಾಲಯದೊಳಗೆ ಪ್ರವೇಶಿಸಿ, ತೆಲಂಗಾಣ ಅಭಿಯಾನದ ಹುತಾತ್ಮರಿಗೆ ನಮನ ಸಲ್ಲಿಸಲು ಅಡ್ಡಿಯಾಗಿದ್ದ ಕಬ್ಬಿಣದ ಮುಳ್ಳುತಂತಿ ಬೇಲಿ ಸರಿಸಿದ್ದ ತೇಜಸ್ವಿ ಸೂರ್ಯ –ಪಿಟಿಐ ಚಿತ್ರ 
ನ.24ರಂದು ಉಸ್ಮಾನಿಯಾ ವಿಶ್ವವಿದ್ಯಾಲಯದೊಳಗೆ ಪ್ರವೇಶಿಸಿ, ತೆಲಂಗಾಣ ಅಭಿಯಾನದ ಹುತಾತ್ಮರಿಗೆ ನಮನ ಸಲ್ಲಿಸಲು ಅಡ್ಡಿಯಾಗಿದ್ದ ಕಬ್ಬಿಣದ ಮುಳ್ಳುತಂತಿ ಬೇಲಿ ಸರಿಸಿದ್ದ ತೇಜಸ್ವಿ ಸೂರ್ಯ –ಪಿಟಿಐ ಚಿತ್ರ    

ಹೈದರಾಬಾದ್‌: ಅನುಮತಿ ಇಲ್ಲದೇ ಉಸ್ಮಾನಿಯಾ ವಿಶ್ವವಿದ್ಯಾಲಯದ ಕ್ಯಾಂಪಸ್‌ ಒಳಗೆ ಅತಿಕ್ರಮವಾಗಿ ಪ್ರವೇಶಿಸಿದ ಕಾರಣ ಬಿಜೆಪಿ ಸಂಸದ ಹಾಗೂ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹಾಗೂ ಅವರ ಬೆಂಬಲಿಗರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳವಾರ, ತೆಲಂಗಾಣ ಅಭಿಯಾನದ ಹುತಾತ್ಮರಿಗೆ ನಮನ ಸಲ್ಲಿಸಲು, ಬ್ಯಾರಿಕೇಡ್‌ಗಳನ್ನು ತೆಗೆದು ತೇಜಸ್ವಿ ಸೂರ್ಯ ಕ್ಯಾಂಪಸ್‌ ಒಳಗೆ ಪ್ರವೇಶಿಸಿದ್ದರು. ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಅವರು ನೀಡಿದ ದೂರಿನ ಅನ್ವಯ, ಭಾರತೀಯ ದಂಡ ಸಂಹಿತೆ ಸೆಕ್ಷನ್‌ 447ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದರು.

‘ಅನುಮತಿ ಇಲ್ಲದೇ ಒಳಪ್ರವೇಶಿಸಿರುವ ಬಿಜೆಪಿ ನಾಯಕ ತೇಜಸ್ವಿ ಸೂರ್ಯ, ಅಲ್ಲಿ ಸಭೆ ನಡೆಸಿದ್ದಾರೆ’ ಎಂದು ರಿಜಿಸ್ಟ್ರಾರ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತೆಲಂಗಾಣ ಪ್ರತ್ಯೇಕ ರಾಜ್ಯದ ಬೇಡಿಕೆ ಸಂದರ್ಭದಲ್ಲಿ ವಿಶ್ವವಿದ್ಯಾಲಯವು ಪ್ರತಿಭಟನೆಯ ಕೇಂದ್ರವಾಗಿತ್ತು. ಡಿ.1ರಂದು ನಡೆಯಲಿರುವ ಹೈದರಾಬಾದ್‌ ಮಹಾನಗರ ಪಾಲಿಕೆ ಚುನಾವಣೆಯ ಪ್ರಚಾರಕ್ಕಾಗಿ ತೇಜಸ್ವಿ ಸೂರ್ಯ ಅಲ್ಲಿಗೆ ಭೇಟಿ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.