ADVERTISEMENT

ದೆಹಲಿಯಲ್ಲಿ ಬೀಡು ಬಿಟ್ಟ ಮುರುಗೇಶ ನಿರಾಣಿ; ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 10:40 IST
Last Updated 25 ಜುಲೈ 2021, 10:40 IST
ಮುರುಗೇಶ ನಿರಾಣಿ, ಪ್ರಜಾವಾಣಿ ಚಿತ್ರ
ಮುರುಗೇಶ ನಿರಾಣಿ, ಪ್ರಜಾವಾಣಿ ಚಿತ್ರ   

ನವದೆಹಲಿ: ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ ಆಗಿರುವ ಸಚಿವ‌ ಮುರುಗೇಶ ನಿರಾಣಿ, ಭಾನುವಾರ ಮಧ್ಯಾಹ್ನ ಇಲ್ಲಿಗೆ ಬಂದಿದ್ದಾರೆ.

ಸೋಮವಾರ ಸಂಜೆಯ ವೇಳೆಗೆ ಮುಖ್ಯಮಂತ್ರಿ ‌ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ನೀಡುವ ಸಾಧ್ಯತೆ ಇರುವುದರಿಂದ ಪಕ್ಷದ‌ ಕೆಲವು ವತಿಷ್ಠರನ್ನು ಭೇಟಿ ಮಾಡಲು ನಿರಾಣಿ ಇಲ್ಲಿಗೆ‌ ಬಂದಿದ್ದಾರೆ ಎಂದು ತಿಳಿದುಬಂದಿದೆ.

ಪಕ್ಷದ‌ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರದ ಗೃಹ ಸಚಿವ‌ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಪಕ್ಷದ‌ ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.