ADVERTISEMENT

‘ನನ್ನ ತೆರಿಗೆ ನನ್ನ ಹಕ್ಕು’: ದೆಹಲಿಯಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನೆ ಆರಂಭ

ಸಿಎಂ, ಡಿಸಿಎಂ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಫೆಬ್ರುವರಿ 2024, 6:15 IST
Last Updated 7 ಫೆಬ್ರುವರಿ 2024, 6:15 IST
   

ನವದೆಹಲಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ‘ನನ್ನ ತೆರಿಗೆ ನನ್ನ ಹಕ್ಕು–ಚಲೋ ದಿಲ್ಲಿ’ ಹೆಸರಿನಲ್ಲಿ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.

ಕೇಂದ್ರ ಸರ್ಕಾರವು ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ಆರಂಭವಾಗಿದೆ.

ಪ್ರತಿಭಟನೆ ನಡೆಸಲು ದೆಹಲಿ ಪೊಲೀಸರು ಎರಡು ಗಂಟೆ ಮಾತ್ರ ಅವಕಾಶ ನೀಡಿದ್ದಾರೆ.

ADVERTISEMENT

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರದ ಬಜೆಟ್ ಗಾತ್ರದ ಹೆಚ್ಚಳಕ್ಕೆ ತಕ್ಕಂತೆ ತೆರಿಗೆ ಆದಾಯದಲ್ಲಿ ಕರ್ನಾಟಕಕ್ಕೆ ಹಣ ಹಂಚಿಕೆಯಾಗಿಲ್ಲ ಎಂದು ಆರೋಪಿಸಿದ್ದಾರೆ.

ಸಚಿವರು, ಶಾಸಕರು ಕೇಂದ್ರದ ವಿರುದ್ಧ ಭಿತ್ತಿತ್ರಗಳನ್ನು ಹಿಡಿದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ Prajavani.net

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.