ADVERTISEMENT

ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ; ಒವೈಸಿ ಪ್ರತಿಕ್ರಿಯೆ ಹೀಗಿತ್ತು..

ಪಿಟಿಐ
Published 14 ಮೇ 2023, 14:22 IST
Last Updated 14 ಮೇ 2023, 14:22 IST
ಅಸಾದುದ್ದೀನ್‌ ಒವೈಸಿ
ಅಸಾದುದ್ದೀನ್‌ ಒವೈಸಿ   

ಹೈದರಾಬಾದ್‌ : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್‌ ಒವೈಸಿ, ‘ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಕಾಂಗ್ರೆಸ್‌ ಈಡೇರಿಸುತ್ತದೆ ಎಂಬ ಆಶಯ ಹೊಂದಿದ್ದೇನೆ‘ ಎಂದಿದ್ದಾರೆ.

ಚುನಾವಣೆಯಲ್ಲಿ ಎಐಎಂಐಎಂ ಪಕ್ಷ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಆದರೆ ಎರಡೂ ಸ್ಥಾನಗಳಲ್ಲಿ ಸೋಲನ್ನನುಭವಿಸಿದೆ.

‘ಕರ್ನಾಟಕದ ಜನರು ಕಾಂಗ್ರೆಸ್‌ಗೆ ಅಧಿಕಾರ ನೀಡಿದ್ದಾರೆ. ಚುನಾವಣಾ ಪೂರ್ವದಲ್ಲಿ ತಾನು ನೀಡಿದ್ದ ಭರವಸೆಗಳನ್ನು ಕಾಂಗ್ರೆಸ್‌ ಈಡೇರಿಸುತ್ತದೆ ಎಂದು ನಾವು ನಿರೀಕ್ಷೆ ಮಾಡುತ್ತೇವೆ. ಆದರೆ, ಕರ್ನಾಟಕ, ಉತ್ತರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಬಿಹಾರ್‌, ಜಾರ್ಖಂಡ್‌ ಅಥವಾ ಪಶ್ಚಿಮ ಬಂಗಾಳ– ಹೀಗೆ ರಾಜ್ಯ ಯಾವುದೇ ಆಗಿರಲಿ ಅಲ್ಲಿ ನಾವು ಎಐಎಂಐಎಂ ಪಕ್ಷವನ್ನು ಬಲಗೊಳಿಸುವುದನ್ನು ಮುಂದುವರಿಸುತ್ತೇವೆ’ ಎಂದು ಒವೈಸಿ ತಿಳಿಸಿದರು.

ADVERTISEMENT

ಇದೇ ವೇಳೆ ಕರ್ನಾಟಕದಲ್ಲಿ ಎಐಎಂಐಎಂ ಪಕ್ಷ ಸೋತ ಕುರಿತು ಪ್ರತಿಕ್ರಿಯಿಸಿದ ಅವರು, ‘ನಾವು ಈ ಬಾರಿ ಗೆಲ್ಲಲಾಗಲಿಲ್ಲ. ಆದರೆ ಪರಿಶ್ರಮದಿಂದ ಕೆಲಸ ನಿರ್ವಹಿಸುತ್ತೇವೆ. ಯಾವುದೇ ಕಾರಣಕ್ಕೂ ನಿರಾಸೆಗೊಳ್ಳುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.