ADVERTISEMENT

ಕೆಂಪು ಈರುಳ್ಳಿ ರಫ್ತಿಗೆ ಅವಕಾಶ ನೀಡಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 15:05 IST
Last Updated 19 ಸೆಪ್ಟೆಂಬರ್ 2020, 15:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ಬೆಂಗಳೂರು ಗುಲಾಬಿ ಈರುಳ್ಳಿ’ಗೆರಫ್ತು ನಿಷೇಧದಿಂದ ವಿನಾಯಿತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಕರ್ನಾಟಕ ರೈತರು ಒತ್ತಾಯಿಸಿದ್ದಾರೆ.

ಕೋಲಾರ ಬಿಜೆಪಿ ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ನೇತೃತ್ವದ ರೈತ ನಿಯೋಗ ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಭೇಟಿ ಮಾಡಿ, ಈ ವಿಷಯವನ್ನು ಸಂಬಂಧಪಟ್ಟ ಸಚಿವರ ಗಮನಕ್ಕೆ ತರುವಂತೆ ಮನವಿ ಮಾಡಿದೆ.

‘ದೇಶೀಯ ಮಾರುಕಟ್ಟೆಯಲ್ಲಿ ಗುಲಾಬಿ ಈರುಳ್ಳಿಗೆ ಬೇಡಿಕೆಯಿಲ್ಲದೇ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರು ಈ ವರ್ಷ 10,000 ಟನ್‌ಗಿಂತಲೂ ಹೆಚ್ಚು ಈರುಳ್ಳಿ ಬೆಳೆದಿದ್ದಾರೆ.ಈರುಳ್ಳಿ ಬೆಳೆ ನಾಶವಾಗುವುದನ್ನು ತಡೆಯಲು ರಫ್ತಿಗೆ ಅವಕಾಶ ಕಲ್ಪಿಸಬೇಕು’ ಎಂದು ನಿಯೋಗ ತಿಳಿಸಿದೆ.

ADVERTISEMENT

ರೈತರ ಸಮಸ್ಯೆಯನ್ನು ಕೇಂದ್ರ ವಾಣಿಜ್ಯ ಮತ್ತು ಕೃಷಿ ಸಚಿವರ ಗಮನಕ್ಕೆ ತರುವುದಾಗಿ ಸದಾನಂದ ಗೌಡ ಅವರು ಭರವಸೆ ನೀಡಿದ್ದಾರೆ ಎಂದು ಅವರ ಕಚೇರಿ ಹೇಳಿಕೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.