ತಿರುಪತಿ: ಆಂಧ್ರಪ್ರದೇಶದ ತಿರುಪತಿ ಲೋಕಸಭಾ ಕ್ಷೇತ್ರಕ್ಕೆ ಏ.17ರಂದು ನಡೆಯುವ ಉಪ ಚುನಾವಣೆಯಲ್ಲಿ ಕರ್ನಾಟಕದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರು ಬಿಜೆಪಿಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈ ಲೋಕಸಭಾ ಕ್ಷೇತ್ರದ (ಎಸ್.ಸಿ) ಪ್ರತಿನಿಧಿಯಾಗಿದ್ದ ಬಲ್ಲಿ ದುರ್ಗಾ ಪ್ರಸಾದ್ ರಾವ್ ಅವರು ಕಳೆದ ಸೆಪ್ಟೆಂಬರ್ನಲ್ಲಿ ನಿಧನರಾಗಿದ್ದರು. ಆಂಧ್ರಪ್ರದೇಶದ ಮಾಜಿ ಐಎಎಸ್ ಅಧಿಕಾರಿ ದಾಸರಿ ಶ್ರೀನಿವಾಸುಲು, ತೆಲಂಗಾಣ ಕೇಡರ್ನ ನಿವೃತ್ತ ಮಾಜಿ ಐಪಿಎಸ್ ಅಧಿಕಾರಿ ಮುನಿ ಸುಬ್ರಹ್ಮಣ್ಯಂ ಅವರು ಸಹ ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳು. ಪಕ್ಷವು ಒಂದೆರಡು ದಿನಗಳಲ್ಲಿ ಅಭ್ಯರ್ಥಿ ಆಯ್ಕೆಯನ್ನು ಪ್ರಕಟಿಸುವ ನಿರೀಕ್ಷೆ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.