ADVERTISEMENT

ದೆಹಲಿಗೆ ಹಾರಿದ ಡಿ.ಕೆ ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 8 ಜುಲೈ 2019, 14:03 IST
Last Updated 8 ಜುಲೈ 2019, 14:03 IST
   

ಬೆಂಗಳೂರು:ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿಸಚಿವ ಡಿ.ಕೆ ಶಿವಕುಮಾರ್‌ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅವರು ಅವರು ದೆಹಲಿಗೆ ತೆರಳಿದರು. ಡಿಕೆಶಿ ಒಬ್ಬರೇ ದೆಹಲಿಗೆ ತೆರಳಿದ್ದು, ಅವರೊಂದಿಗೆ ಬೇರೆ ಯಾವ ನಾಯಕರೂ ಇರಲಿಲ್ಲ.

ವಿಧಾನಸಭೆ ಸದಸ್ಯತ್ವಕ್ಕೆರಾಜೀನಾಮೆ ನೀಡಿರುವ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ 13 ಮಂದಿ ಶಾಸಕರು ಸದ್ಯ ಮುಂಬೈನ ಸೋಫಿಟೆಲ್‌ ಹೋಟೆಲ್‌ನಲ್ಲಿ ತಂಗಿದ್ದಾರೆ. ನಿನ್ನೆಯಷ್ಟೇ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅತೃಪ್ತ ಶಾಸಕರು ಬೆಂಗಳೂರಿಗೆ ಹಿಂದಿರುಗಿ ಬಂದು ರಾಜೀನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದರು.

ADVERTISEMENT

ಈ ನಡುವೆ ಸರ್ಕಾರದ ‘ಎಲ್ಲ ಮಂತ್ರಿಗಳೂ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಪುಟ ಪುನಾರಚನೆ ಮಾಡಲಾಗುತ್ತಿದ್ದು, ಅತೃಪ್ತಿ ಇರುವ ಶಾಸಕರೆಲ್ಲರೂ ಮರಳಿ ಬೆಂಗಳೂರಿಗೆ ಬಂದರೆ, ಅವರ ಸಮಸ್ಯೆಗಳನ್ನು ಆಲಿಸಲಾಗುವುದು,’ಎಂದು ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ಟ್ವಿಟರ್‌ ಮೂಲಕ ಈ ಸಂದೇಶ ರವಾನಿಸಿದ ಬೆನ್ನಿಗೇ ಶಿವಕುಮಾರ್‌ ಅವರು ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.