ADVERTISEMENT

News Express | ಕಾಂಗ್ರೆಸ್‌ ನಾಟಕ ಕಂಪನಿ: ಶ್ರೀರಾಮುಲು ಟೀಕೆ

ಪ್ರಜಾವಾಣಿ ವಿಶೇಷ
Published 11 ನವೆಂಬರ್ 2023, 15:50 IST
Last Updated 11 ನವೆಂಬರ್ 2023, 15:50 IST

‘ಬಿಜೆಪಿಯಿಂದ ಹಲವು ಶಾಸಕರು ನಮ್ಮ ಪಕ್ಷಕ್ಕೆ ಬರುತ್ತಾರೆ ಎನ್ನುವ ಕಾಂಗ್ರೆಸ್‌ ಶಾಸಕ ರವಿ ಗಾಣಿಗ ಹೇಳಿಕೆಗೆ ಮಹತ್ವ ನೀಡುವ ಅಗತ್ಯವಿಲ್ಲ. ಇದೆಲ್ಲವೂ ಕಾಂಗ್ರೆಸ್‌ ನಾಟಕ ಕಂಪನಿಯ ಭಾಗ’ ಎಂದು ಬಿಜೆಪಿ ಮುಖಂಡ ಶ್ರೀರಾಮುಲು ಟೀಕಿಸಿದರು. ಕೊಪ್ಪಳದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕಾಂಗ್ರೆಸ್‌ನವರು ಉದ್ದೇಶಪೂರ್ವಕವಾಗಿಯೇ ತಮ್ಮ ಪಕ್ಷದವರಿಂದ ಈ ರೀತಿಯ ಹೇಳಿಕೆ ಕೊಡಿಸುತ್ತಿದ್ದಾರೆ. ಜನ ಹಾಗೂ ವಿರೋಧ ಪಕ್ಷದವರು ಬೇರೆ ವಿಷಯಗಳ ಬಗ್ಗೆ ಕೇಳಬಾರದು ಎನ್ನುವ ಕಾರಣಕ್ಕಾಗಿ ಹೀಗೆ ನಾಟಕ ಮಾಡುತ್ತಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.