ADVERTISEMENT

'ಕರುಣಾನಿಧಿ ಚೇತರಿಸಿಕೊಳ್ಳುತ್ತಿದ್ದಾರೆ' : ಸ್ಟಾಲಿನ್

​ಪ್ರಜಾವಾಣಿ ವಾರ್ತೆ
Published 30 ಜುಲೈ 2018, 5:59 IST
Last Updated 30 ಜುಲೈ 2018, 5:59 IST
   

ಚೆನ್ನೈ: ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರ ತಂಡವೊಂದು ನಿರಂತರ ನಿಗಾ ವಹಿಸಿ, ಚಿಕಿತ್ಸೆ ನೀಡುತ್ತಿದ್ದಾರೆ. ಅಭಿಮಾನಿಗಳು ಯಾವುದೇ ರೀತಿಯ ಸಂಘರ್ಷವನ್ನುಂಟು ಮಾಡಬಾರದು. ಪೊಲೀಸರಿಗಾಗಲೀ, ಸಾರ್ವಜನಿಕರಿಗಾಗಲೀ ತೊಂದರೆ ನೀಡಬಾರದು ಎಂದು ಕರುಣಾನಿಧಿ ಪುತ್ರಸ್ಟಾಲಿನ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.


ಕಲೈಂಗಾರ್ ಚೆನ್ನಾಗಿದ್ದಾರೆ.ನಾವು ಈಗ ಮನೆಗೆ ಹೋಗುತ್ತಿದ್ದೇವೆ ಎಂದು ಕರುಣಾನಿಧಿ ಅವರ ಹಿರಿಯ ಪುತ್ರ ಎಂಕೆ ಅಳಗಿರಿ ಹೇಳಿದ್ದು, ಅಪ್ಪನ ಆರೋಗ್ಯ ಸ್ಥಿರವಾಗಿದೆ ಎಂದು ಮಗಳು ಕನಿಮೊಳಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ.

ಮೂತ್ರನಾಳದ ಸೋಂಕು ಮತ್ತು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಕರುಣಾನಿಧಿ ಅವರಿಗೆ ಗೋಪಾಲಪುರಂನಲ್ಲಿರುವ ಅವರ ನಿವಾಸದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಶುಕ್ರವಾರ ತಡರಾತ್ರಿ ರಕ್ತದ ಒತ್ತಡ ದಿಢೀರ್‌ ಇಳಿಕೆಯಾದ ಕಾರಣ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ADVERTISEMENT

ಇದನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.