ಪ್ರಯಾಗ್ರಾಜ್: ಜ್ಞಾನವಾಪಿ ಮಸೀದಿಯಲ್ಲಿ ಸಮೀಕ್ಷೆ ನಡೆಸುವಂತೆ ಭಾರತೀಯ ಪುರಾತತ್ವ ಇಲಾಖೆಗೆ ವಾರಾಣಸಿ ನ್ಯಾಯಾಲಯವು ನೀಡಿದ್ದ ಆದೇಶಕ್ಕೆ ಅಲಹಾಬಾದ್ ಹೈಕೋರ್ಟ್ ಅಕ್ಟೋಬರ್ 31ರವರೆಗೆ ತಡೆಯಾಜ್ಞೆಯನ್ನು ನೀಡಿದೆ.
ನ್ಯಾಯಮೂರ್ತಿ ಪ್ರಕಾಶ್ ಅವರು ವಾದ–ಪ್ರತಿವಾದಗಳನ್ನು ಆಲಿಸಿದ ನಂತರ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 18ಕ್ಕೆ ಮುಂದೂಡಿದರು.
ಏಪ್ರಿಲ್ 8, 2021ಕ್ಕೆ ವಾರಾಣಸಿಯ ನ್ಯಾಯಾಲಯವು ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನುಆಗಸ್ಟ್ 30ರಂದು ಪರಿಶೀಲಿಸಿದ್ದ ಅಲಹಾಬಾದ್ ಹೈಕೋರ್ಟ್ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.