ಜಮ್ಮು: ಜಮ್ಮು ಮತ್ತು ಕಾಶ್ಮೀರದ ಬಿಜೆಪಿಯ ರಾಜ್ಯ ಕಾರ್ಯದರ್ಶಿ ಅನಿಲ್ ಪರಿಹರ್ ಮತ್ತು ಅವರ ಸಹೋದರ ಅಜಿತ್ ಅವರನ್ನು ಉಗ್ರರು ಗುರುವಾರ ರಾತ್ರಿ ಹತ್ಯೆಗೈದಿದ್ದಾರೆ.
ಕಿಶ್ತವಾರ್ದಿಂದ ಹಿಂತಿರುಗುತ್ತಿದ್ದಾಗ ಅತಿ ಸಮೀಪದಿಂದ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಕಳೆದ ಏಳು ವರ್ಷಗಳಲ್ಲಿ ಜಮ್ಮು ಪ್ರದೇಶದಲ್ಲಿ ರಾಜಕೀಯ ಮುಖಂಡರೊಬ್ಬರ ಮೇಲೆ ನಡೆದ ಮೊದಲ ಹತ್ಯೆ ಇದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.