ADVERTISEMENT

ಶ್ರೀನಗರ | ದೇಶ ವಿರೋಧಿ ಚಟುವಟಿಕೆ ಆರೋಪ: ಪತ್ರಕರ್ತನ ಬಂಧನ

​ಪ್ರಜಾವಾಣಿ ವಾರ್ತೆ
Published 9 ಜನವರಿ 2022, 6:01 IST
Last Updated 9 ಜನವರಿ 2022, 6:01 IST

ಶ್ರೀನಗರ: ದೇಶದ ಭದ್ರತೆ ಮತ್ತು ಐಕ್ಯತೆಗೆ ಧಕ್ಕೆ ತರುವ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಪತ್ರಕರ್ತನೊಬ್ಬನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.

ಸಜಾದ್‌ ಅಹ್ಮದ್‌ ದಾರ್‌ ಬಂಧಿತ ಆರೋಪಿ. ಆನ್‌ಲೈನ್‌ ಪೋರ್ಟಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಈತನನ್ನು ಎರಡು ದಿನಗಳ ಹಿಂದೆ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

’ಆರೋಪಿಯು ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಅಶಾಂತಿ ಸೃಷ್ಟಿಸುವ ಕೆಲಸ ಮಾಡುತ್ತಿದ್ದ. ನಕಲಿ ವಿಡಿಯೋ, ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡುವ ಮೂಲಕ ಸಾರ್ವಜನಿಕರನ್ನು ಅಧಿಕಾರಿಗಳು, ಭದ್ರತಾ ಪಡೆಗಳು ಹಾಗೂ ಸರ್ಕಾರದ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದ’ ಎಂದು ಪೊಲೀಸರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.