ಜಮ್ಮು: ದಕ್ಷಿಣ ಕಾಶ್ಮೀರದಲ್ಲಿ ಕಿಡಿಗೇಡಿಗಳುಸೇಬು ಹಣ್ಣಿನ ತೋಟ ನಾಶಪಡಿಸಿರುವುದನ್ನು ಖಂಡಿಸಿ ಕಾಶ್ಮೀರಿ ಪಂಡಿತರ ಗುಂಪೊಂದು ಸೋಮವಾರ ಪ್ರತಿಭಟನೆ ನಡೆಸಿದೆ.
ಕಾಶ್ಮೀರದಲ್ಲಿ ಅಲ್ಪಸಂಖ್ಯಾತ ಸಮುದಾಯದಲ್ಲಿ ಅಸ್ಥಿರತೆ ಮೂಡಿಸುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದ್ದು, ಕಿಡಿಗೇಡಿಗಳನ್ನು ಶೀಘ್ರ ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಘಟನೆ ಕುರಿತು ಮಾಹಿತಿ ನೀಡಿದ ಸೇಬು ಹಣ್ಣಿನ ತೋಟದ ಮಾಲೀಕ ಅಜಯ್ ರೈನಾ, ‘2 ದಿನದ ಹಿಂದಷ್ಟೇ ಕಾಶ್ಮೀರದಿಂದ ಜಮ್ಮುವಿಗೆ ಬಂದಿದ್ದೆ. ಈ ಸಂದರ್ಭದಲ್ಲಿ ಅನಂತ್ನಾಗ್ ಜಿಲ್ಲೆಯ ಅಕುರ ಹಳ್ಳಿಯಲ್ಲಿರುವ ನನ್ನಸೇಬು ಹಣ್ಣಿನ ತೋಟವನ್ನುಕಿಡಿಗೇಡಿಗಳುರಾತ್ರಿ ವೇಳೆ ಹಾನಿಗೊಳಿಸಿರುವ ಕುರಿತು ಮಾಹಿತಿ ಲಭಿಸಿತು’ ಎಂದರು.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.