ADVERTISEMENT

Telangana Assembly Election Results 2023: ರಾಜೀನಾಮೆ ಸಲ್ಲಿಸಿದ ಕೆಸಿಆರ್

ಪಿಟಿಐ
Published 3 ಡಿಸೆಂಬರ್ 2023, 14:56 IST
Last Updated 3 ಡಿಸೆಂಬರ್ 2023, 14:56 IST
ಸಿಎಂ ಕೆಸಿಆರ್
ಸಿಎಂ ಕೆಸಿಆರ್    

ಹೈದರಾಬಾದ್: ಚುನಾವಣೆಯಲ್ಲಿ ಬಿಆರ್‌ಎಸ್‌ ಸೋಲು ಕಂಡ ನಂತರದಲ್ಲಿ, ಕೆ. ಚಂದ್ರಶೇಖರ ರಾವ್ ಅವರು ತೆಲಂಗಾಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ಅವರು ರಾಜ್ಯಪಾಲೆ ತಮಿಳ್‌ಇಸೈ  ಸೌಂದರರಾಜನ್ ಅವರಿಗೆ ರವಾನಿಸಿದ್ದಾರೆ ಎಂದು ಪಕ್ಷದ ಕಾರ್ಯಾಧ್ಯಕ್ಷ ಕೆ.ಟಿ. ರಾಮ ರಾವ್ ಅವರು ತಿಳಿಸಿದ್ದಾರೆ. 

ಕೆಸಿಆರ್ ಅವರ ನೇತೃತ್ವದಲ್ಲಿ ಬಿಆರ್‌ಎಸ್‌ ಪಕ್ಷವು ತೆಲಂಗಾಣದ ಜನರ ಒಳಿತಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸಲಿದೆ ಎಂದು ರಾಮ ರಾವ್ ಅವರು ಹೇಳಿದ್ದಾರೆ. ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆ ಹೇಳಿರುವ ರಾಮ ರಾವ್, ಹೊಸ ಸರ್ಕಾರಕ್ಕೆ ಎಲ್ಲ ಬಗೆಯ ಸಹಕಾರವನ್ನು ತಮ್ಮ ಪಕ್ಷ ನೀಡಲಿದೆ ಎಂದು ತಿಳಿಸಿದ್ದಾರೆ. ಬಿಆರ್‌ಎಸ್‌ ಪಕ್ಷವು ರಚನಾತ್ಮಕ ವಿರೋಧ ಪಕ್ಷದ ಕೆಲಸವನ್ನು ನಿರ್ವಹಿಸಲಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT