ADVERTISEMENT

ಪಶುವೈದ್ಯೆ ಪ್ರಕರಣದ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಲು ಕೆಸಿಆರ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2019, 14:54 IST
Last Updated 1 ಡಿಸೆಂಬರ್ 2019, 14:54 IST
   

ಹೈದರಾಬಾದ್‌:ಪಶುವೈದ್ಯೆ ಮೇಲಿನಅತ್ಯಾಚಾರ ಮತ್ತು ಕೊಲೆ ಪ್ರಕರಣದ ಶೀಘ್ರಇತ್ಯರ್ಥಕ್ಕೆತ್ವರಿತ ನ್ಯಾಯಾಲಯ ಸ್ಥಾಪಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ಆದೇಶಿಸಿದ್ದಾರೆ.

ಪ್ರಕರಣ ನಡೆದ ನಂತರ ಮೊದಲ ಬಾರಿಗೆ ಸಾರ್ವಜನಿಕ ಹೇಳಿಕೆ ನೀಡಿರುವ ಕೆಸಿಆರ್‌, ಘಟನೆಯನ್ನು ಅಮಾನವೀಯ ಮತ್ತು ಭಯಾನಕ ಎಂದು ವ್ಯಾಖ್ಯಾನಿಸಿದ್ದಾರೆ.

ಪಶುವೈದ್ಯೆ ಕುಟುಂಬಕ್ಕೆ ಎಲ್ಲ ರೀತಿಯ ಸಹಾಯ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.

ADVERTISEMENT

ಮರಣದಂಡನೆ ಶಿಕ್ಷೆಗೆಒತ್ತಾಯ

ಕೆಸಿಆರ್ ಪುತ್ರ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಕೆ ಟಿ.ರಾಮರಾವ್‌ ಅವರು ಮಹಿಳೆ ಮತ್ತು ಮಕ್ಕಳ ಮೇಲೆ ಅಪರಾಧ ಎಸಗುವವರಿಗೆ ಮರಣ ದಂಡನೆ ವಿಧಿಸಲು ಕಾನೂನು ತರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ.

ಈ ವಿಚಾರದ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ರಾಮರಾವ್‌, ಮಹಿಳೆ ಮತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವವರನ್ನು ಸಮಯ ವಿಳಂಬ ಮಾಡದೇ ಗಲ್ಲಿಗೇರಿಸಲು ಕಾನೂನು ಬರಬೇಕು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.