ADVERTISEMENT

ಚಳಿಗಾಲ ವಿರಾಮದ ನಂತರ ತೆರೆದ ಕೇದಾರನಾಥ ದೇವಾಲಯ

ಪಿಟಿಐ
Published 25 ಏಪ್ರಿಲ್ 2023, 15:34 IST
Last Updated 25 ಏಪ್ರಿಲ್ 2023, 15:34 IST
ಚಳಿಗಾಲದ ವಿರಾಮದ ನಂತರ ಮಂಗಳವಾರ ಕೇದಾರನಾಥ ದೇವಾಲಯದ ಬಾಗಿಲು ತೆರೆದಿದ್ದು, ಸಾವಿರಾರು ಭಕ್ತರು ಶಿವನ ದರ್ಶನ ಪಡೆದರು –ಪಿಟಿಐ ಚಿತ್ರ
ಚಳಿಗಾಲದ ವಿರಾಮದ ನಂತರ ಮಂಗಳವಾರ ಕೇದಾರನಾಥ ದೇವಾಲಯದ ಬಾಗಿಲು ತೆರೆದಿದ್ದು, ಸಾವಿರಾರು ಭಕ್ತರು ಶಿವನ ದರ್ಶನ ಪಡೆದರು –ಪಿಟಿಐ ಚಿತ್ರ   

ಕೇದಾರನಾಥ : ಚಳಿಗಾಲದ ವಿರಾಮದ ನಂತರ ಮಂಗಳವಾರ ಬೆಳಗ್ಗೆ ಕೇದಾರನಾಥ ದೇಗುಲದ ಬಾಗಿಲು ತೆರೆಯಲಾಯಿತು. ಶೂನ್ಯ ತಾಪಮಾನದಲ್ಲೂ ಪ್ರಾರ್ಥನೆ ಸಲ್ಲಿಸಲು ಸಾವಿರಾರು ಯಾತ್ರಿಕರು ಆಗಮಿಸಿದ್ದರು.

ದೇವಸ್ಥಾನದ ಮುಖ್ಯ ಅರ್ಚಕ ರಾವಲ್‌ ಭೀಮಾ ಶಂಕರ್ ಲಿಂಗ್ ಅವರು ದೇವಾಲಯದ ಬಾಗಿಲು ತೆರೆದು, ಪೂಜೆ ನೆರವೇರಿಸಿದರು.

ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು, ‘ಕೇದಾರಿಪುರಿ ನಿರ್ಮಾಣದ ನೇತೃತ್ವ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಲ್ಲಿ ಮೊದಲ ಪೂಜೆ ಮಾಡಲಾಗಿದೆ’ ಎಂದು ಹೇಳಿದರು.

ADVERTISEMENT

ಕೇದಾರನಾಥದಲ್ಲಿನ ಸೌಲಭ್ಯಗಳನ್ನು ಸುಧಾರಿಸಲು ಮತ್ತು ತೀರ್ಥಯಾತ್ರೆಯನ್ನು ಸುರಕ್ಷಿತವಾಗಿ ಮತ್ತು ಭಕ್ತರಿಗೆ ಸುಲಭಗೊಳಿಸಲು ರಾಜ್ಯ ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.