ADVERTISEMENT

ಸಂವಿಧಾನ ರಕ್ಷಣೆಗಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಿ: ಯೆಚೂರಿ

ಪಿಟಿಐ
Published 18 ಸೆಪ್ಟೆಂಬರ್ 2022, 11:21 IST
Last Updated 18 ಸೆಪ್ಟೆಂಬರ್ 2022, 11:21 IST
ಸೀತಾರಾಮ ಯೆಚೂರಿ
ಸೀತಾರಾಮ ಯೆಚೂರಿ   

ಹೈದರಾಬಾದ್‌: ‘ಸಂವಿಧಾನ ಹಾಗೂ ಜನರ ಹಕ್ಕುಗಳ ರಕ್ಷಣೆಗಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು’ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಅವರು ಭಾನುವಾರ ಇಲ್ಲಿ ಹೇಳಿದ್ದಾರೆ.

‘ಹೈದರಾಬಾದ್‌ ವಿಮೋಚನೆ ಹೋರಾಟದಲ್ಲಿ ಬೆಜೆಪಿಗೆ ಯಾವುದೇ ಪಾತ್ರವಿಲ್ಲ. ಬಿಜೆಪಿಯವರು ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

‘ನೀವು ಭಾರತವನ್ನು ಜಾತ್ಯತೀತ, ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ಉಳಿಸಬೇಕೆಂದು ಬಯಸಿದರೆ, ಅಧಿಕೃತ ಸಂಸ್ಥೆಗಳನ್ನು ಆಡಳಿತಾರೂಢ ಪಕ್ಷವು ದುರ್ಬಳಕೆ ಮಾಡಬಾರದು ಎಂದಿದ್ದರೆ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು’ ಎಂದೂ ಹೇಳಿದ್ದಾರೆ.

ADVERTISEMENT

‘ಬಿಜೆಪಿಯು ತೆಲಂಗಾಣದಲ್ಲಿ ಅಧಿಕಾರಕ್ಕೆ ಬರಲು ಬಯಸುತ್ತಿದೆ. ಇದಕ್ಕಾಗಿ ಇತಿಹಾಸವನ್ನು ತಿರುಚಿ, ಕೋಮುವಾದವನ್ನು ಪ್ರೋತ್ಸಾಹಿಸುತ್ತಿದೆ’ ಎಂದೂ ಯೆಚೂರಿ ಅವರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.