ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಾದಿಸುವ ರಾಷ್ಟ್ರೀಯತೆ ಡೋಂಗಿ ಎಂದು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ. ರಾಷ್ಟ್ರೀಯವಾದಿಯಾಗಿರುವ ಪ್ರಧಾನಿಯೊಬ್ಬರು ರಾಜಧಾನಿಯ ಮುಖ್ಯಮಂತ್ರಿ ಮೇಲೆ ಹಲ್ಲೆ ಮಾಡಿಸುವಂತಹ ಕೆಲಸ ಮಾಡುತ್ತಾರೆಯೇ ಎಂದು ಅವರು ಪ್ರಶ್ನಿಸಿದ್ದಾರೆ.
ದೆಹಲಿಯಲ್ಲಿ ಶನಿವಾರ ರೋಡ್ಷೋ ನಡೆಸುತ್ತಿದ್ದ ಸಂದರ್ಭದಲ್ಲಿ ಕೇಜ್ರಿವಾಲ್ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿದ್ದ. ಇದು ಬಿಜೆಪಿಯ ಕೃತ್ಯ ಎಂದು ಕೇಜ್ರಿವಾಲ್ ಆರೋಪಿಸಿದ್ದರು.
‘ಮೋದಿ ಅವರ ರಾಷ್ಟ್ರೀಯತೆ ಹುಸಿ. ಮೋದಿ ಅವರ ರಾಷ್ಟ್ರೀಯವಾದ ವಂಚನೆ. ಮೋದಿ ಅವರು ರಾಷ್ಟ್ರೀಯವಾದದ ಮಾಯಾ
ಜಾಲ ಸೃಷ್ಟಿಸಿದ್ದಾರೆ. ಈ ಮಾಯಾಜಾಲದ ಆಚೆಗೆ ಹೋದರೆ ಸತ್ಯ ಗೋಚರವಾಗುತ್ತದೆ’ ಎಂದು ಮಾಧ್ಯಮಗೋಷ್ಠಿಯಲ್ಲಿ ಕೇಜ್ರಿ
ವಾಲ್ ಹೇಳಿದ್ದಾರೆ. ಕೇಂದ್ರ ಸರ್ಕಾರವು ತೆರಿಗೆ ಭಯೋತ್ಪಾದನೆ ನಡೆಸುತ್ತಿದೆ. ಈ ಭಯೋತ್ಪಾದನೆಯಿಂದಾಗಿ ದೇಶದ ವ್ಯಾಪಾರ ಮತ್ತು ಉದ್ಯಮ ನೆಲಕಚ್ಚಿದೆ ಎಂದೂ ಅವರು ಆಪಾದಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.