ಶಿಮ್ಲಾ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಹಾನ್ ಸುಳ್ಳುಗಾರ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಸೋಮವಾರ ಆರೋಪಿಸಿದ್ದಾರೆ.
ದೆಹಲಿಯ ಅಬಕಾರಿ ನೀತಿ ಜಾರಿಯಲ್ಲಿ ಅಕ್ರಮವಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಹಾಗೂ ಎಎಪಿ ಮುಖಂಡರ ನಡುವಣ ವಾಕ್ಸಮರ ಸೋಮವಾರ ಮತ್ತಷ್ಟು ತೀವ್ರಗೊಂಡಿತು.
ಬಿಜೆಪಿಗೆ ಸೇರಿದರೆ ಸಿಬಿಐ ಹಾಗೂ ಇ.ಡಿ ಸೇರಿದಂತೆ ಎಲ್ಲ ಪ್ರಕರಣಗಳನ್ನು ಕೈಬಿಡುವುದಾಗಿ ಬಿಜೆಪಿ ಆಮಿಷ ಒಡ್ಡಿರುವುದಾಗಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ.
ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ನಾಯಕ ಅನುರಾಗ್ ಠಾಕೂರ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಚಿವರು ಮಹಾನ್ ಸುಳ್ಳುಗಾರರು ಎಂದು ವಾಗ್ದಾಳಿ ಮಾಡಿದ್ದಾರೆ.
ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿ ಮಾತನಾಡಿದ ಅನುರಾಗ್, ದೆಹಲಿಯ ಎಎಪಿ ಮಾದರಿ ಸರ್ಕಾರದ ಆಡಳಿತವು ಸಂಪೂರ್ಣ ವೈಫಲ್ಯ ಕಂಡಿದೆ. ಮೊಹಲ್ಲಾ ಕ್ಲಿನಿಕ್ ಮೊಹಲ್ಲಾ ಮದ್ಯ ಮಾರಾಟ ಕೇಂದ್ರವಾಗಿ ಮಾರ್ಪಾಡುಗೊಂಡಿದೆ ಎಂದು ಹೇಳಿದ್ದಾರೆ.
ಕೇಜ್ರಿವಾಲ್ ಅಬಕಾರಿ ಹಗರಣದ ಸೂತ್ರಧಾರಿಯಾಗಿದ್ದು, ಸಿಸೋಡಿಯಾ ಪ್ರಮುಖ ಆರೋಪಿಯಾಗಿದ್ದಾರೆ. ಇದುವರೆಗೂ ಹಗರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟವಾದ ಉತ್ತರವನ್ನು ಕೊಟ್ಟಿಲ್ಲ ಎಂದು ಹೇಳಿದರು.
ಇವನ್ನೂ ಓದಿ:
ಪಕ್ಷಕ್ಕೆ ಸೇರಿದರೆ ಪ್ರಕರಣಗಳನ್ನು ಕೈಬಿಡುವುದಾಗಿ ಬಿಜೆಪಿ ಆಮಿಷ: ಮನೀಶ್ ಸಿಸೋಡಿಯಾ
ಕೇಜ್ರಿವಾಲ್ ಮುಂದಿನ ಪ್ರಧಾನಿಯಾಗಲೆಂದು ಇಡೀ ದೇಶ ಬಯಸುತ್ತದೆ: ಮನೀಶ್ ಸಿಸೋಡಿಯಾ
ದೆಹಲಿ ಅಬಕಾರಿ ನೀತಿ ವಿವಾದ: ಮನೀಶ್ ಸಿಸೋಡಿಯಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ದೆಹಲಿ ಅಬಕಾರಿ ನೀತಿ ನಿರೂಪಣೆ ಸಭೆಯಲ್ಲಿ ಕೆಸಿಆರ್ ಕುಟುಂಬ ಸದಸ್ಯರು ಭಾಗಿ: ಬಿಜೆಪಿ
ಮನೀಶ್ ಸಿಸೋಡಿಯಾಗೆ ಲುಕ್ ಔಟ್ ನೋಟಿಸ್ ನೀಡಿಲ್ಲ: ಸಿಬಿಐ ಸ್ಪಷ್ಟನೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.