ADVERTISEMENT

ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಉಚಿತ: ಕೇಜ್ರಿವಾಲ್‌ ಭರವಸೆ

ಪಿಟಿಐ
Published 19 ಜನವರಿ 2020, 20:00 IST
Last Updated 19 ಜನವರಿ 2020, 20:00 IST
ಅರವಿಂದ್ ಕೇಜ್ರಿವಾಲ್‌
ಅರವಿಂದ್ ಕೇಜ್ರಿವಾಲ್‌   

ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷವನ್ನು(ಎಎಪಿ) ಜನತೆ ಪುನರ್‌ ಆಯ್ಕೆ ಮಾಡಿದರೆ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣ, ಮಹಿಳಾ ಸುರಕ್ಷತೆಗೆ ಮೊಹಲ್ಲಾ ಮಾರ್ಷಲ್‌ಗಳ ನೇಮಕದ ಭರವಸೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ನೀಡಿದ್ದಾರೆ.

ಭಾನುವಾರ ಪಕ್ಷದ ಕಚೇರಿಯಲ್ಲಿ ‘ಕೇಜ್ರಿವಾಲ್‌ ಅವರ 10 ಭರವಸೆಗಳು’ ಎಂಬ ಕಾರ್ಡ್‌ ಬಿಡುಗಡೆಗೊಳಿಸಿದ ಕೇಜ್ರಿವಾಲ್‌,
‘ಇದು ಪ್ರಣಾಳಿಕೆಯಲ್ಲ. ಇದು ದೆಹಲಿ ಜನತೆಗೆ ನನ್ನ ಭರವಸೆ. ಹತ್ತು ದಿನದೊಳಗಾಗಿ ನಾವು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಿದ್ದೇವೆ’ ಎಂದರು.

‘ಈಗಾಗಲೇ ಚಾಲ್ತಿಯಲ್ಲಿರುವ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌, ಉಚಿತ ಆರೋಗ್ಯ ಸೌಲಭ್ಯ ಮುಂದುವರಿಸುವುದಾಗಿ’ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.