ADVERTISEMENT

ಕೇರಳ: ಕಾಂಗ್ರೆಸ್‌ನ ಉಚ್ಛಾಟಿತ ನಾಯಕ ಥಾಮಸ್‌ಗೆ ವಿಶೇಷ ಪ್ರತಿನಿಧಿ ಸ್ಥಾನ

​ಪ್ರಜಾವಾಣಿ ವಾರ್ತೆ
Published 19 ಜನವರಿ 2023, 22:36 IST
Last Updated 19 ಜನವರಿ 2023, 22:36 IST
ಥಾಮಸ್
ಥಾಮಸ್   

ತಿರುವನಂತಪುರಂ: ಕಾಂಗ್ರೆಸ್‌ನ ಉಚ್ಚಾಟಿತ ನಾಯಕ, ಕೇಂದ್ರದ ಮಾಜಿ ಸಚಿವ ಕೆ.ವಿ.ಥಾಮಸ್ ಅವರನ್ನು ಕೇರಳ ಸರ್ಕಾರವು ನವದೆಹಲಿಯಲ್ಲಿ ವಿಶೇಷ ಪ್ರತಿನಿಧಿಯಾಗಿ ನೇಮಿಸಿ, ಕ್ಯಾಬಿನೆಟ್ ದರ್ಜೆ ನೀಡಲು ನಿರ್ಧರಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈನಿರ್ಧಾರ ತೆಗೆದುಕೊಳ್ಳಲಾಗಿದೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಆರೋಪದ ಮೇಲೆ ಥಾಮಸ್‌ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಏಳು ತಿಂಗಳ ಹಿಂದೆ ಉಚ್ಚಾಟಿಸಲಾಗಿತ್ತು.

2022ರ ಮೇ ತಿಂಗಳಲ್ಲಿ ಕೊಚ್ಚಿಯಲ್ಲಿ ನಡೆದ ಉಪಚುನಾವಣೆಯ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ವೇದಿಕೆ ಹಂಚಿಕೊಂಡ ಕಾರಣ ಕಾಂಗ್ರೆಸ್ ಥಾಮಸ್ ವಿರುದ್ಧ ತೀವ್ರ ಕ್ರಮಕೈಗೊಂಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.