ತಿರುವನಂತಪುರಂ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಎಂಟರ್ಪ್ರೈಸಸ್ ಲಿಮಿಟೆಡ್ಗೆ ಗುತ್ತಿಗೆ ನೀಡುವ ಕೇಂದ್ರ ಸಚಿವ ಸಂಪುಟದ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಕೇರಳ ವಿಧಾನಸಭೆಯಲ್ಲಿ ಸೋಮವಾರ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಲಾಯಿತು.
ಈ ನಿರ್ಣಯವನ್ನು ಅಂಗೀಕರಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, 'ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯ ವಿಶೇಷ ಉದ್ದೇಶದ ಘಟಕದಲ್ಲಿ (ಸ್ಪೆಷಲ್ ಪರ್ಪಸ್ ವೆಹಿಕಲ್– ಎಸ್ಪಿವಿ) ರಾಜ್ಯ ಸರ್ಕಾರದ ಪಾಲೂ ಇದ್ದು, ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು’ ಎಂದು ಹೇಳಿದರು.
'ವಿಮಾನ ನಿಲ್ದಾಣ ನಿರ್ವಹಣೆಗೆ ಅದಾನಿ ಎಂಟರ್ಪ್ರೈಸಸ್ ಉಲ್ಲೇಖಿಸಿದ ಮೊತ್ತವನ್ನು ರಾಜ್ಯ ಸರ್ಕಾರನೀಡಲು ಒಪ್ಪಿದ್ದರೂ, ಕೇಂದ್ರ ಸರ್ಕಾರ ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸಲು ಹೊರಟಿರುವುದು ಸರಿಯಾದ ನಿರ್ಧಾರವಲ್ಲ’ ಎಂದು ಅವರು ಹೇಳಿದರು.
ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿಥಾಲ್ ಅವರು ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸುವುದರ ವಿರುದ್ಧದ ನಿರ್ಣಯವನ್ನುಸದನದಲ್ಲಿ ಬೆಂಬಲಿಸಿದ್ದರೂ, ಸದನದ ಹೊರಗೆ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ' ಎಂದು ಆರೋಪಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.