ADVERTISEMENT

ಎಡ ಪಕ್ಷದ ಕಾರ್ಯಕರ್ತರಿಂದ ಜೀವ ಬೆದರಿಕೆ: ಕೇರಳ ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್

ಡೆಕ್ಕನ್ ಹೆರಾಲ್ಡ್
Published 14 ಜೂನ್ 2021, 3:26 IST
Last Updated 14 ಜೂನ್ 2021, 3:26 IST
ರಮ್ಯಾ ಹರಿದಾಸ್ (ಡೆಕ್ಕನ್ ಹೆರಾಲ್ಡ್ ಚಿತ್ರ)
ರಮ್ಯಾ ಹರಿದಾಸ್ (ಡೆಕ್ಕನ್ ಹೆರಾಲ್ಡ್ ಚಿತ್ರ)   

ತಿರುವನಂತಪುರ: ಎಡ ಪಕ್ಷದ ಕಾರ್ಯಕರ್ತರು ತಮ್ಮನ್ನು ನಿಂದಿಸಿದ್ದಲ್ಲದೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಕೇರಳದ ಪಾಲಕ್ಕಾಡ್ ಜಿಲ್ಲೆಯ ಅಲತ್ತೂರ್ ಕ್ಷೇತ್ರದ ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್ ಆರೋಪಿಸಿದ್ದಾರೆ.

ಅಲತ್ತೂರ್‌ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮತ್ತು ಇತರ ಏಳು ಮಂದಿ ತಮ್ಮನ್ನು ನಿಂದಿಸಿದ್ದು, ಜೀವ ಬೆದರಿಕೆಯೊಡ್ಡಿದ್ದಾರೆ. ಕೋವಿಡ್ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿ ಕೆಲವು ಮಹಿಳಾ ಕಾರ್ಯಕರ್ತರ ಜತೆ ಮಾತುಕತೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಸಂಸದೆ ಉಲ್ಲೇಖಿಸಿದ್ದಾರೆ.

ಬೆದರಿಕೆಯೊಡ್ಡಿದ್ದನ್ನು ಪ್ರತಿಭಟಿಸಿ ರಸ್ತೆಯಲ್ಲಿ ಧರಣಿ ನಡೆಸಿದ ಅವರು ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.