ತಿರುವನಂತಪುರ: ಎಡ ಪಕ್ಷದ ಕಾರ್ಯಕರ್ತರು ತಮ್ಮನ್ನು ನಿಂದಿಸಿದ್ದಲ್ಲದೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಕೇರಳದ ಪಾಲಕ್ಕಾಡ್ ಜಿಲ್ಲೆಯ ಅಲತ್ತೂರ್ ಕ್ಷೇತ್ರದ ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್ ಆರೋಪಿಸಿದ್ದಾರೆ.
ಅಲತ್ತೂರ್ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮತ್ತು ಇತರ ಏಳು ಮಂದಿ ತಮ್ಮನ್ನು ನಿಂದಿಸಿದ್ದು, ಜೀವ ಬೆದರಿಕೆಯೊಡ್ಡಿದ್ದಾರೆ. ಕೋವಿಡ್ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿ ಕೆಲವು ಮಹಿಳಾ ಕಾರ್ಯಕರ್ತರ ಜತೆ ಮಾತುಕತೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಸಂಸದೆ ಉಲ್ಲೇಖಿಸಿದ್ದಾರೆ.
ಬೆದರಿಕೆಯೊಡ್ಡಿದ್ದನ್ನು ಪ್ರತಿಭಟಿಸಿ ರಸ್ತೆಯಲ್ಲಿ ಧರಣಿ ನಡೆಸಿದ ಅವರು ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.