ತಿರುವನಂತಪುರ: ಸಂಸದ ಶಶಿತರೂರ್ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಸಂಬಂಧ, ನ್ಯಾಯಾಲಯಕ್ಕೆ ಹಾಜರಾಗಿ ಎಂದುಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಇಲ್ಲಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಖ್ಯ ಮ್ಯಾಜಿಸ್ಟ್ರೇಟ್ (ಸಿಜೆಎಂ) ಸಮನ್ಸ್ ಜಾರಿ ಮಾಡಿದ್ದಾರೆ.
‘ದೂರಿನ ಕುರಿತು ಸ್ವಯಂಪ್ರೇರಿತವಾಗಿ ಕ್ರಮ ಕೈಗೊಂಡಿರುವ ಸಿಜೆಎ, ಮೇ 2ರ ಒಳಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಚಿವರಿಗೆ ಸೂಚಿಸಿದ್ದಾರೆ’ ಎಂದು ತರೂರ್ ಪರ ವಕೀಲರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಪತ್ನಿ ಸುನಂದಾ ಪುಷ್ಕರ್ ಅವರ ಸಾವಿಗೆ ಸಂಬಂಧಿಸಿರವಿಶಂಕರ್ ಪ್ರಸಾದ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ, 2018ರ ಡಿಸೆಂಬರ್ನಲ್ಲಿ ತರೂರ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ತಮ್ಮನ್ನು ‘ಕೊಲೆ ಆರೋಪಿ’ ಎಂದು ಕರೆದಿದ್ದಕ್ಕಾಗಿ ರವಿಶಂಕರ್ ಪ್ರಸಾದ್ ‘ಬೇಷರತ್ ಕ್ಷಮೆ’ ಕೋರಬೇಕು ಎಂದು ತರೂರ್ ನೋಟಿಸ್ ಕಳುಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.