ADVERTISEMENT

ಶಬರಿಮಲೆಯ ತೀರ್ಥ ಸ್ಯಾನಿಟೈಸರ್ ರೀತಿಯಲ್ಲಿ ಬಳಕೆ; ಕೇರಳ ಸಚಿವರ ವಿರುದ್ಧ ಆಕ್ರೋಶ

ಐಎಎನ್ಎಸ್
Published 17 ನವೆಂಬರ್ 2021, 10:59 IST
Last Updated 17 ನವೆಂಬರ್ 2021, 10:59 IST
ಶಬರಿಮಲೆ ದೇವಸ್ಥಾನ
ಶಬರಿಮಲೆ ದೇವಸ್ಥಾನ   

ತಿರುವನಂತಪುರ: ಪ್ರಸಿದ್ಧ ಶಬರಿಮಲೆ ದೇವಸ್ಥಾನದ ತೀರ್ಥ ಪ್ರಸಾದವನ್ನು ಹ್ಯಾಂಡ್ ಸ್ಯಾನಿಟೈಸರ್ ರೀತಿಯಲ್ಲಿಬಳಕೆ ಮಾಡಿರುವ ಸಂಬಂಧ ಕೇರಳದ ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ವಿರುದ್ಧ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ.

ಶಬರಿಮಲೆಯಲ್ಲಿ ಎರಡು ತಿಂಗಳ ಕಾಲ ನಡೆಯಲಿರುವ ಮಂಡಳಂ-ಮಕರವಿಳಕ್ಕು ವಾರ್ಷಿಕ ಧಾರ್ಮಿಕ ಯಾತ್ರೆಗೆ ಚಾಲನೆ ದೊರಕಿದೆ.

ತೀರ್ಥಯಾತ್ರೆಯ ಕಾಲಘಟ್ಟದಲ್ಲಿ ದೇವಸ್ಥಾನದ ಬಾಗಿಲು ತೆರೆಯಲು ಹಾಗೂ ಭಕ್ತರನ್ನು ಸ್ವಾಗತಿಸಲು ಸೋಮವಾರ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಅನಂತಗೋಪನ್ ಮತ್ತು ಸ್ಥಳೀಯ ಶಾಸಕ ಪ್ರವೋದ್ ನಾರಾಯಣನ್ ಅವರೊಂದಿಗೆ ಸಚಿವರು ದೇವಸ್ಥಾನಕ್ಕೆ ಆಗಮಿಸಿದ್ದರು.

ADVERTISEMENT

ಪುರೋಹಿತರು ನೀಡಿದ ತೀರ್ಥ ಪ್ರಸಾದವನ್ನು ಸ್ವೀಕರಿಸಿದ ಸಚಿವರು ಹ್ಯಾಂಡ್ ಸ್ಯಾನಿಟೈಸರ್ ರೀತಿಯಲ್ಲಿ ಬಳಕೆ ಮಾಡಿರುವುದಾಗಿ ಆರೋಪಿಸಲಾಗಿದೆ. ಈ ಸಂಬಂಧ ಕೇರಳ ಸಚಿವರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗಳು ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.