ADVERTISEMENT

ಕೇರಳ: ಕೆಲವು ಔಷಧಗಳಿಗೆ ನಿಷೇಧ

ಪಿಟಿಐ
Published 7 ಅಕ್ಟೋಬರ್ 2025, 16:17 IST
Last Updated 7 ಅಕ್ಟೋಬರ್ 2025, 16:17 IST
<div class="paragraphs"><p>ಔಷಧ&nbsp;</p></div>

ಔಷಧ 

   

ತಿರುವನಂತಪುರ: ತಮಿಳುನಾಡು ಮೂಲದ ಶ್ರೀಸನ್ ಫಾರ್ಮಾ ಕಂ‍ಪನಿ ತಯಾರಿಸುವ ಔಷಧಗಳ ವಿತರಣೆಯನ್ನು ಕೇರಳ ಸರ್ಕಾರ ಮಂಗಳವಾರ ನಿಷೇಧಿಸಿದೆ.

ಶ್ರೀಸನ್ ಕಂಪನಿಯ ಪರವಾನಗಿಯನ್ನು ರದ್ದುಗೊಳಿಸುವ ತಮಿಳುನಾಡು ಡ್ರಗ್ಸ್ ಕಂಟ್ರೋಲರ್ ಅವರ ಕ್ರಮಗಳನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ADVERTISEMENT

ಗುಜರಾತ್‌ ಮೂಲದ ಕಂಪನಿ ತಯಾರಿಸುವ ‘ರೆಸ್ಪಿಫ್ರೆಶ್ ಟಿಆರ್‌’ ಔಷಧಿಯ ಗುಣಮಟ್ಟ ಕಳಪೆಯಾಗಿರುವುದು ಕಂಡುಬಂದಿದ್ದು, ಅದರ ವಿತರಣೆಯನ್ನು ತಕ್ಷಣವೇ ನಿಲ್ಲಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಐವರು ವಿತರಕರು ಈ ಔಷಧಗಳನ್ನು ಪೂರೈಸುತ್ತಿದ್ದು, ವಿತರಣೆಯನ್ನು ನಿಲ್ಲಿಸುವಂತೆ ಅವರಿಗೆ ಸೂಚಿಸಲಾಗಿದೆ ಎಂದಿದ್ದಾರೆ.

‘ಈ ಔಷಧ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಆಸ್ಪತ್ರೆಗಳ ಮೂಲಕ ಈ ಔಷಧಗಳನ್ನು ವಿತರಿಸಲಾಗುವುದಿಲ್ಲ’ ಎಂದು ಹೇಳಿದ್ದಾರೆ.

ಕೆಮ್ಮಿನ ಸಿರಪ್‌ ಸೇವನೆಯಿಂದ ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ 14 ಮಕ್ಕಳು ಮೃತಪಟ್ಟ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಕೇರಳ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.