ADVERTISEMENT

ಕೇರಳಕ್ಕೆ ರಿಲಯನ್ಸ್‌ ಫೌಂಡೇಶನ್‌ದಿಂದ ₹21 ಕೋಟಿ ದೇಣಿಗೆ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2018, 19:20 IST
Last Updated 1 ಸೆಪ್ಟೆಂಬರ್ 2018, 19:20 IST
ರಿಲಯನ್ಸ್‌ ಫೌಂಡೇಶನ್‌ ಅಧ್ಯಕ್ಷೆ ನೀತಾ ಅಂಬಾನಿ ಅವರು ಕೇರಳದ ಅಲಪ್ಪಿ ಜಿಲ್ಲೆಯ ಪುನರ್ವಸತಿ ಕೇಂದ್ರದಲ್ಲಿ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ವಿತರಿಸಿದರು.
ರಿಲಯನ್ಸ್‌ ಫೌಂಡೇಶನ್‌ ಅಧ್ಯಕ್ಷೆ ನೀತಾ ಅಂಬಾನಿ ಅವರು ಕೇರಳದ ಅಲಪ್ಪಿ ಜಿಲ್ಲೆಯ ಪುನರ್ವಸತಿ ಕೇಂದ್ರದಲ್ಲಿ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ವಿತರಿಸಿದರು.   

ಅಲಪ್ಪಿ: ಕೇರಳ ಪ್ರವಾಹ ಸಂತ್ರಸ್ತರ ನಿಧಿಗೆ ರಿಲಯನ್ಸ್‌ ಫೌಂಡೇಶನ್‌ ₹21 ಕೋಟಿ ದೇಣಿಗೆ ಹಾಗೂ ₹50 ಕೋಟಿ ಮೊತ್ತದ ಸಾಮಗ್ರಿಗಳನ್ನು ಕೊಡುಗೆ ನೀಡಿದೆ.

ಫೌಂಡೇಶನ್‌ ಅಧ್ಯಕ್ಷೆ ನೀತಾ ಅಂಬಾನಿ ಅವರು ದೇಣಿಗಯ ಚೆಕ್‌ ಅನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಹಸ್ತಾಂತರಿಸಿದರು. ಪುನರ್ವಸತಿ ಕೇಂದ್ರಗಳಲ್ಲಿರುವವರಿಗೆ ಆಹಾರಧಾನ್ಯ, ಬಟ್ಟೆ, ಔಷಧಿಗಳನ್ನು ಫೌಂಡೇಶನ್‌ ಕಾರ್ಯಕರ್ತರು ವಿತರಿಸಿದರು. ಪ್ರವಾಹದಿಂದ ಹೆಚ್ಚಿನ ಹಾನಿ ಸಂಭವಿಸಿರುವ ವಯನಾಡ್‌ ಮತ್ತು ಅಲಪ್ಪಿ ಜಿಲ್ಲೆಗಳಲ್ಲಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಲಾಗಿದೆ.

ಅಲಪ್ಪಿ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ನೀತಾ ಅಂಬಾನಿ ಅವರು, ‘ಕೇರಳ ಮರು ನಿರ್ಮಾಣಕ್ಕೆ ಕೈಜೋಡಿಸಲು ಮತ್ತು ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ನಮ್ಮ ಫೌಂಡೇಶನ್‌ ಬದ್ಧವಾಗಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.