ಕೊಚ್ಚಿ: ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ 25ನೇ ಆರೋಪಿ ಶಂಸುದ್ದೀನ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಲ್ಲಿನ ಎನ್ಐಎ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.
ಕೋಯಿಕ್ಕೋಡ್ ಜಿಲ್ಲೆಯ ಆಭರಣ ಅಂಗಡಿಯೊಂದರ ಮಾಲೀಕರಾಗಿರುವ ಶಂಸುದ್ದೀನ್, ಚಿನ್ನ ಕಳ್ಳಸಾಗಣೆ ಪ್ರಕರಣದ ಮತ್ತೊಬ್ಬ ಆರೋಪಿ ಸಮ್ಜು ಸಂಬಂಧಿ.
ಸ್ವಪ್ನಾ ಸುರೇಶ್, ಸಂದೀಪ್ ನಾಯರ್, ಸರಿತ್ ಪಿ.ಎಸ್, ರಮೀಜ್ ಕೆ.ಟಿ. ಹಾಗೂ ಪ್ರಕರಣದ ಇತರ ಪ್ರಮುಖ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.