ADVERTISEMENT

ಸಾಲಮನ್ನಾ: ಕೇರಳ ಸರ್ಕಾರ ಭರವಸೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2019, 18:42 IST
Last Updated 10 ಜೂನ್ 2019, 18:42 IST

ತಿರುವನಂತಪುರ: ರೈತರ ಆತ್ಮಹತ್ಯೆ ತಡೆಯಲು ಮಧ್ಯಪ್ರವೇಶಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಮಾಡಿದ ಮನವಿಗೆ ಕೇರಳ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

ಎರಡು ಲಕ್ಷ ರೂಪಾಯಿವರೆಗಿನ ಸಾಲಮನ್ನಾ ಹಾಗೂ ಸಹಕಾರ ಬ್ಯಾಂಕ್‌ಗಳು ಸಾಲ ವಸೂಲಾತಿ ಕ್ರಮಕ್ಕೂ ಸದ್ಯಕ್ಕೆ ತಡೆಯೊಡ್ಡಲು ಕ್ರಮವಹಿಸಲಾಗುವುದು ಎಂದು ಕೇರಳ ಸರ್ಕಾರ ಭರವಸೆ ನೀಡಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ವಿಧಾನಸಭೆಯಲ್ಲಿ ಈ ವಿಷಯ ಪ್ರಕಟಿಸಿದರು.ಕೇರಳ ವಿಧಾನಸಭೆಯಲ್ಲಿ ಪ್ರತಿಪಕ್ಷವಾಗಿರುವ ಕಾಂಗ್ರೆಸ್‌ ಸೋಮವಾರ ಸದನದಲ್ಲಿ ವಿಷಯವನ್ನು ಪ್ರಸ್ತಾಪಿಸಿತು. ಈ ಕುರಿತು ನಿಲುವಳಿ ಸೂಚನೆಯನ್ನು ಮಂಡಿಸಲು ಅವಕಾಶ ನಿರಾಕರಿಸಿದ್ದನ್ನು ಖಂಡಿಸಿ ಸಭಾತ್ಯಾಗವನ್ನು ಮಾಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.