ADVERTISEMENT

ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕದಿದ್ದರೆ ಶಾಸನ : ಕೇರಳ ಸಚಿವೆ

ಪಿಟಿಐ
Published 10 ನವೆಂಬರ್ 2022, 14:19 IST
Last Updated 10 ನವೆಂಬರ್ 2022, 14:19 IST
   

ತಿರುವನಂತಪುರ: ರಾಜ್ಯಪಾಲರನ್ನು ವಿಶ್ವವಿದ್ಯಾಲಯಗಳ ಕುಲಾಧಿಪತಿ ಹುದ್ದೆಯಿಂದ ತೆರವುಗೊಳಿಸುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕದಿದ್ದರೆ ಮುಂದಿನ ತಿಂಗಳು ವಿಧಾನಸಭೆ ಅಧಿವೇಶನ ಕರೆದು ಶಾಸನ ರೂಪಿಸುತ್ತೇವೆ ಎಂದು ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್‌.ಬಿಂದು ಗುರುವಾರ ತಿಳಿಸಿದ್ದಾರೆ.

ಈ ವಿವಾದಿತ ಸುಗ್ರೀವಾಜ್ಞೆಯನ್ನು ರಾಷ್ಟ್ರಪತಿಗೆ ಶಿಫಾರಸು ಮಾಡಲು ರಾಜ್ಯಪಾಲರು ಸಿದ್ಧತೆ ನಡೆಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವೆ, ‘ಆ ರೀತಿ ಮಾಡಲು ಅವರಿಗೆ ಹಕ್ಕಿದೆ’ ಎಂದಿದ್ದಾರೆ.

‘ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ರಾಷ್ಟ್ರಪತಿಗೆ ಕಳುಹಿಸಲಿ ಅದರಲ್ಲೇನಿದೆ. ನಾವು ಅದರಲ್ಲಿ ಏನಾದರೂ ಆಕ್ಷೇಪಾರ್ಹ ಅಂಶಗಳನ್ನು ಸೇರಿಸಿದ್ದೇವೆಯೇ’ ಎಂದು ಸಚಿವೆ ಪ್ರಶ್ನಿಸಿದ್ದಾರೆ.

ADVERTISEMENT

ರಾಜ್ಯಪಾಲರನ್ನು ವಿಶ್ವವಿದ್ಯಾಲಯಗಳ ಕುಲಾಧಿಪತಿ ಹುದ್ದೆಯಿಂದ ತೆರವುಗೊಳಿಸುವ ಸುಗ್ರೀವಾಜ್ಞೆ ಹೊರಡಿಸಲು ಎಲ್‌ಡಿಎಫ್‌ ಸರ್ಕಾರ ಬುಧವಾರ ತೀರ್ಮಾನಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.