ADVERTISEMENT

ಸಂಸತ್ ಭವನ: ನಾರಾಯಣ ಗುರು ಪ್ರತಿಮೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2023, 13:42 IST
Last Updated 22 ಸೆಪ್ಟೆಂಬರ್ 2023, 13:42 IST
<div class="paragraphs"><p>ನಾರಾಯಣ ಗುರು</p></div>

ನಾರಾಯಣ ಗುರು

   

ತಿರುವನಂತಪುರ: ಸಮಾಜ ಸುಧಾರಕ ನಾರಾಯಣ ಗುರು ಅವರ ಪ್ರತಿಮೆಯನ್ನು ಸಂಸತ್ತಿನ ಆವರಣದಲ್ಲಿ ಅಳವಡಿಸಬೇಕು ಎಂದು ರಾಜ್ಯಸಭೆ ಸದಸ್ಯ ಎ.ಎ. ರಹೀಮ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ದೂರದೃಷ್ಟಿ ಹೊಂದಿದ್ದ ಸಮಾಜ ಸುಧಾರಕ, ತತ್ವಜ್ಞಾನಿ ಮತ್ತು ಆಧ್ಯಾತ್ಮಿಕ ವ್ಯಕ್ತಿಯಾಗಿದ್ದ ನಾರಾಯಣ ಗುರು ಅವರು ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 

ADVERTISEMENT

ನಾರಾಯಣ ಗುರು ಅವರ ತತ್ವ ಸಿದ್ಧಾಂತಗಳು ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿದ್ದು, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಆಧ್ಯಾತ್ಮಿಕತೆಯನ್ನು ಉತ್ತೇಜಿಸುತ್ತವೆ. ಹೀಗಾಗಿ ಸಂಸತ್ತಿನ ಆವರಣದಲ್ಲಿ ನಾರಾಯಣ ಗುರು ಅವರ ಪ್ರತಿಮೆ ಸ್ಥಾಪಿಸಬೇಕು. ಇದರಿಂದ ಅವರಿಗೆ ಗೌರವ ನೀಡಿದಂತಾಗುತ್ತದೆ ಎಂದಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.