ತಿರುವನಂತಪುರ: ಕೇರಳದ ಪತ್ತನಂತಿಟ್ಟದ ಕ್ವಾರಿಯೊಂದರಲ್ಲಿ ಇಬ್ಬರು ವಲಸೆ ಕಾರ್ಮಿಕರು ಸೋಮವಾರ ಸಿಲುಕಿಕೊಂಡಿದ್ದಾರೆ.
ವಲಸೆ ಕಾರ್ಮಿಕರನ್ನು ಬಿಹಾರ ಮೂಲದ ಅಜಿ ರೈ (38) ಮತ್ತು ಒಡಿಶಾ ಮೂಲದ ಮಹಾದೇವ್ ಎಂದು ಗುರುತಿಸಲಾಗಿದೆ. ಅವರಿಬ್ಬರು ಜೆಸಿಬಿ ನಿರ್ವಾಹಕರಾಗಿದ್ದರು.
ಇಬ್ಬರೂ ಕ್ವಾರಿಯೊಳಗೆ ಹೋಗಿದ್ದ ವೇಳೆ ಕಲ್ಲುಗಳು ಉರುಳಿಬಿದ್ದಿದ್ದರಿಂದ ವಾಪಸ್ ಬರಲು ಸಾಧ್ಯವಾಗುತ್ತಿಲ್ಲ. ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದಾವೆ. ಆದರೆ ಕಾರ್ಮಿಕರನ್ನು ಪತ್ತೆಹಚ್ಚುವುದು ಕಷ್ಟಸಾಧ್ಯವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.