ತಿರುವನಂತಪುರಂ:ಕೋವಿಡ್ 19 ರೋಗ ಬಾಧಿತರಾಗಿದ್ದ68ರ ಹರೆಯದ ವ್ಯಕ್ತಿಯೊಬ್ಬರು ಮಂಗಳವಾರ ತಿರುವನಂತಪುರಂನಲ್ಲಿ ಸಾವಿಗೀಡಾಗಿದ್ದಾರೆ. ಕೋವಿಡ್ನಿಂದಾಗಿ ಕೇರಳದಲ್ಲಿ ಇಲ್ಲಿಯವರಿಗೆ ಎರಡು ಸಾವು ಸಂಭವಿಸಿದೆ.
ಸಾವಿಗೀಡಾದ ವ್ಯಕ್ತಿಗೆ ಕಿಡ್ನಿ ವೈಫಲ್ಯವಿತ್ತು ಎಂದು ತಿರುವನಂತಪುರಂ ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯಕೀಯ ಅಧೀಕ್ಷಕರು ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಮಾರ್ಚ್ 28ರಂದು ಕೊಚ್ಚಿ ವೈದ್ಯಕೀಯ ಕಾಲೇಜಿನಲ್ಲಿ 69ರ ಹರೆಯದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದರು.
ಸೋಮವಾರ ಕೇರಳದಲ್ಲಿ 32 ಹೊಸ ಪ್ರಕರಣಗಳು ವರದಿಯಾಗಿದ್ದು 213 ರೋಗಿಗಳು ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.ಅದೇ ವೇಳೆ 93 ಮತ್ತು 88ರ ಹರೆಯದ ವೃದ್ಧ ದಂಪತಿಗಳು ಚಿಕಿತ್ಸೆ ಪಡೆದು ರೋಗಮುಕ್ತರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.