ನವದೆಹಲಿ: ಕೇರಳದ ಕೋಯಿಕ್ಕೋಡ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 7ರಂದು ಸಂಭವಿಸಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ದುರಂತದಲ್ಲಿ ಗಾಯಗೊಂಡಿದ್ದ 85 ಪ್ರಯಾಣಿಕರು ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ಬುಧವಾರ ತಿಳಿಸಿದೆ.
‘ವಿಮಾನ ದುರಂತದಲ್ಲಿ ಗಾಯಗೊಂಡಿದ್ದ 149 ಮಂದಿಯನ್ನು ಚಿಕಿತ್ಸೆಗೆಂದು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿತ್ತು. ಈವರೆಗೆ 85 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ’ ಎಂದುನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಹೇಳಿಕೆ ನೀಡಿದ್ದಾರೆ.
ದುಬೈನಿಂದ ಕೋಯಿಕ್ಕೋಡ್ಗೆ 190 ಪ್ರಯಾಣಿಕರನ್ನು ಕರೆತರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಶುಕ್ರವಾರ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿತ್ತು. ಈ ದುರಂತದಲ್ಲಿ 18 ಮಂದಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.