ಕಠ್ಮಂಡು:ನಿಜವಾದ ಅಯೋಧ್ಯೆ ಭಾರತದಲ್ಲಿ ಅಲ್ಲ, ನೇಪಾಳದಲ್ಲಿದೆ ಮತ್ತು ರಾಮನು ನೇಪಾಳ ದಕ್ಷಿಣ ಭಾಗದ ಥೋರಿಯಲ್ಲಿ ಜನಿಸಿದ್ದನು ಎಂದು ಪ್ರಧಾನಿ ಕೆ.ಪಿ. ಶರ್ಮ ಒಲಿ ಹೇಳಿದ್ದಾರೆ.
ಈ ಹೇಳಿಕೆಯನ್ನು ನವದೆಹಲಿಯಲ್ಲಿ ಖಂಡಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಬಿಜಯ್ ಸೋನ್ಕರ್ ಶಾಸ್ತ್ರಿ, ಎಡಪಕ್ಷಗಳು ಭಾರತದಲ್ಲಿ ಕೂಡ ಜನರ ನಂಬಿಕೆಯೊಂದಿಗೆ ಚೆಲ್ಲಾಟವಾಡಿವೆ. ಭಾರತದಲ್ಲಿ ಆಗಿರುವಂತೆ ನೇಪಾಳದಲ್ಲಿ ಕೂಡ ಕಮ್ಯುನಿಸ್ಟ್ ಪಕ್ಷದವರು ಜನರಿಂದ ತಿರಸ್ಕಾರಕ್ಕೆ ಒಳಗಾಗಲಿದ್ದಾರೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.