ADVERTISEMENT

ಗುಜರಾತ್: ಕೆರೆಯಲ್ಲಿ ಮುಳುಗಿ ಐವರು ಬಾಲಕರು ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಮೇ 2023, 6:02 IST
Last Updated 14 ಮೇ 2023, 6:02 IST
ಕೆರೆಯಲ್ಲಿ ಮುಳುಗಿ ಐವರು ಸಾವು
ಕೆರೆಯಲ್ಲಿ ಮುಳುಗಿ ಐವರು ಸಾವು   

ಅಹಮದಾಬಾದ್‌: ಐವರು ಬಾಲಕರು ಇಲ್ಲಿನ ಕೃಷ್ಣ ಸಾಗರ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃಷ್ಣ ಸಾಗರ ಕೆರೆಯಲ್ಲಿ ಇಬ್ಬರು ಬಾಲಕರು ಈಜುತ್ತಿದ್ದಾಗ ನೀರಿನಲ್ಲಿ ಮುಳುಗಿದ್ದಾರೆ. ಇವರನ್ನು ರಕ್ಷಿಸಲು ಹೋದ ಮೂವರು ಬಾಲಕರು ಕೂಡ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೃಷ್ಣ ಸಾಗರ ಕೆರೆಯಲ್ಲಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಮೃತದೇಹಗಳನ್ನು ಹೊರ ತೆಗೆದು ಅವರು ಕುಟುಂಬಗಳಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಮೃತ ಬಾಲಕರು 16 ರಿಂದ 17 ವರ್ಷದೊಳಗಿನವರಾಗಿದ್ದಾರೆ. ಘಟನೆ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.