ಅಲಹಾಬಾದ್: ಕುಂಭ ಮೇಳ, ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಭೇಟಿಯಾಗಿ, ವಿಚಾರ ವಿನಿಮಯ ಮಾಡುವ ಸ್ಥಳವೂ ಆಗಿತ್ತು!
ಇಲ್ಲಿನ ಮ್ಯೂಸಿಯಂನಲ್ಲಿ ಪ್ರದರ್ಶನಕ್ಕೆ ಇಡಲಾಗಿರುವ ದಾಖಲೆಗಳಲ್ಲಿ ಈ ಅಂಶ ಬೆಳಕಿಗೆ ಬಂದಿದೆ. 1920ರ ಫೆಬ್ರುವರಿ 2ರಂದು ಕೇಂದ್ರೀಯ ಗುಪ್ತಚರ ಇಲಾಖೆಯ ನಿರ್ದೇಶಕರು ಬರೆದ ಪತ್ರಗಳು, ವಿವಿಧ ದಾಖಲೆಗಳು ಹಲವಾರು ಕುತೂಹಲಕರ ಸಂಗತಿಗಳ ಮೇಲೆ ಬೆಳಕು ಚೆಲ್ಲುತ್ತವೆ.
ರಾಜಕೀಯ ಸುಧಾರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿ ಆಗಿನ ಕಾಂಗ್ರೆಸ್ ತೆಗೆದುಕೊಂಡಿದ್ದ ನಿರ್ಧಾರಗಳಿಗೆ ಬೆಂಬಲ ಸೂಚಿಸಿ 1918ರಲ್ಲಿ ನಡೆದ ಕುಂಭಮೇಳದಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಕೈಗೊಂಡಿದ್ದರು’ ಎಂಬ ಅಂಶ ದಾಖಲೆಗಳಿಂದ ಗೊತ್ತಾಗುತ್ತದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.