ADVERTISEMENT

ಭಾರತ-ಚೀನಾ ಸಂಘರ್ಷ: ಹಿಮಾಚಲ ಪ್ರದೇಶದ ಎರಡು ಜಿಲ್ಲೆಗಳಲ್ಲಿ ಭಾರಿ ಕಟ್ಟೆಚ್ಚರ

ಏಜೆನ್ಸೀಸ್
Published 16 ಜೂನ್ 2020, 17:04 IST
Last Updated 16 ಜೂನ್ 2020, 17:04 IST
ಹಿಮಾಚಲ ಪ್ರದೇಶ (ಸಾಂದರ್ಭಿಕ ಚಿತ್ರ)
ಹಿಮಾಚಲ ಪ್ರದೇಶ (ಸಾಂದರ್ಭಿಕ ಚಿತ್ರ)   

ಶಿಮ್ಲಾ: ಪೂರ್ವ ಲಡಾಖ್‌ನ ಗಲ್ವಾನ್‌ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆ ಹಿನ್ನೆಲೆಯಲ್ಲಿ ಚೀನಾ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಹಿಮಾಚಲ ಪ್ರದೇಶ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಸ್ಥಳೀಯ ಜನರ ಸುರಕ್ಷತೆಗಾಗಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಕಿನ್‌ಔರ್‌ ಮತ್ತು ಲಹೌಲ್-ಸ್ಪಿಟಿ ಜಿಲ್ಲೆಗಳ ಪೊಲೀಸರಿಗೆ ಎಚ್ಚರಿಕೆ ಮತ್ತು ಸಲಹೆ ನೀಡಲಾಗಿದೆ ಎಂದು ರಾಜ್ಯ ಪೊಲೀಸ್ ವಕ್ತಾರ ಖುಶಾಲ್ ಶರ್ಮಾ ತಿಳಿಸಿದ್ದಾರೆ.

ಚೀನಾದ ಸೇನಾಪಡೆಗಳೊಂದಿಗೆ ಸೋಮವಾರ ರಾತ್ರಿ ನಡೆದ ಸಂಘರ್ಷದಲ್ಲಿ ಭಾರತೀಯ ಸೇನೆಯ ಕನಿಷ್ಠ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.