ADVERTISEMENT

ಲಖಿಂಪುರ ಹಿಂಸಾಚಾರ: ಸೀತಾಪುರದತ್ತ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್‌

ಪಿಟಿಐ
Published 6 ಅಕ್ಟೋಬರ್ 2021, 5:47 IST
Last Updated 6 ಅಕ್ಟೋಬರ್ 2021, 5:47 IST
ಸಚಿನ್‌ ಪೈಲಟ್‌
ಸಚಿನ್‌ ಪೈಲಟ್‌   

ಜೈಪುರ: ಉತ್ತರ ಪ್ರದೇಶದ ಲಖಿಂಪುರದಲ್ಲಿ ಸಂಭವಿಸಿದ ಹಿಂಸಾಚಾರ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡಲು ಮುಂದಾಗಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಸೀತಾಪುರದಲ್ಲಿ ಬಂಧನದಲ್ಲಿದ್ದು, ಅವರನ್ನು ಭೇಟಿ ಮಾಡುವ ಸಲುವಾಗಿ ಹಿರಿಯ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಬುಧವಾರ ಸೀತಾಪುರದತ್ತ ಹೊರಟಿದ್ದಾರೆ.

ದೆಹಲಿಗೆ ವಿಮಾನದಲ್ಲಿ ತೆರಳಿ, ಅಲ್ಲಿಂದ ಗಾಜಿಪುರ್ ಮೂಲಕ ಸೀತಾಪುರಕ್ಕೆ ರಸ್ತೆಯಲ್ಲಿ ತೆರಳುವರು. ಅವರು ಲಖಿಂಪುರದಲ್ಲಿ ರೈತರನ್ನು ಸಹ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಲಖಿಂಪುರಕ್ಕೆ ತೆರಳಲು ಮುಂದಾಗಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ಸೋಮವಾರ ಸೀತಾಪುರದಲ್ಲಿ ಬಂಧಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.