ಲಖಿಂಪುರ– ಖೇರಿ, ಉತ್ತರ ಪ್ರದೇಶ: ಲಖಿಂಪುರ– ಖೇರಿ ಹಿಂಸಾಚಾರ ಪ್ರಕರಣದ ಆರೋಪಿಗಳಾದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಮತ್ತು ಇತರ ಇಬ್ಬರ ಜಾಮೀನು ಅರ್ಜಿಯ ವಿಚಾರಣೆಯನ್ನು ಇಲ್ಲಿನ ನ್ಯಾಯಾಲಯವು ಬುಧವಾರ ನವೆಂಬರ್ 15ಕ್ಕೆ ಮುಂದೂಡಿದೆ.
ಅಕ್ಟೋಬರ್ 3ರಂದು ಲಖಿಂಪುರ– ಖೇರಿಗೆ ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿ ಖಂಡಿಸಿ ಪ್ರತಿಭಟನೆಯೊಂದು ನಡೆಯುವ ವೇಳೆ ಜರುಗಿದ ಹಿಂಸಾಚಾರದಲ್ಲಿ ಬಿಜೆಪಿ ಕಾರ್ಯಕರ್ತರಿದ್ದ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ರೈತರು, ಒಬ್ಬ ಪತ್ರಕರ್ತ ಸೇರಿ ಎಂಟು ಮಂದಿ ಮೃತಪಟ್ಟಿದ್ದರು.
ಆಶಿಶ್ ಮಿಶ್ರಾ, ಆಶಿಶ್ ಪಾಂಡೆ ಮತ್ತು ಲವಕುಶ್ ರಾಣಾ ಸೇರಿದಂತೆ 13 ಮಂದಿ ಬಂಧಿತರಾಗಿದ್ದಾರೆ.
ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮುಖೇಶ್ ಮಿಶ್ರಾ ಅವರು ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ನವೆಂಬರ್ 15ಕ್ಕೆ ಮುಂದೂಡಿದ್ದಾರೆ ಎಂದು ಜಿಲ್ಲಾ ಸರ್ಕಾರಿ ವಕೀಲ ಅರವಿಂದ ತ್ರಿಪಾಠಿ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.