ADVERTISEMENT

ಲಖಿಂಪುರ ಖೇರಿ ಪ್ರಕರಣ: ಆಶಿಶ್‌ ಮಿಶ್ರಾ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 13:30 IST
Last Updated 5 ಡಿಸೆಂಬರ್ 2022, 13:30 IST
ಆಶಿಶ್‌ ಮಿಶ್ರಾ (ಸಂಗ್ರಹ ಚಿತ್ರ)
ಆಶಿಶ್‌ ಮಿಶ್ರಾ (ಸಂಗ್ರಹ ಚಿತ್ರ)   

ಲಖನೌ: ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್‌ ಮಿಶ್ರಾ ಅವರು, ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ನಾಲ್ವರು ರೈತರ ಹತ್ಯೆ ಪ್ರಕರಣದಲ್ಲಿ ವಿಚಾರಣೆ ಎದುರಿಸಲಿದ್ದಾರೆ.

ಆಶಿಶ್‌ಮಿಶ್ರಾ ಮತ್ತಿತರರ ವಿರುದ್ಧ ಮಂಗಳವಾರ ಆರೋಪ ಪಟ್ಟಿ ಸಲ್ಲಿಸಲಾಗುತ್ತದೆ.

ಇತ್ತೀಚೆಗೆ ಪ್ರಕರಣದಲ್ಲಿ ತಮ್ಮ ಹೆಸರು ಕೈಬಿಡಬೇಕೆಂದು ಅವರು ಕೋರಿದ್ದ ಅರ್ಜಿಯನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿತ್ತು.

ADVERTISEMENT

ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆ ರದ್ದಿಗೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದವರ ಮೇಲೆ ಕಾರು ಹರಿಸಿ ನಾಲ್ವರು ರೈತರನ್ನು ಹತ್ಯೆ ಮಾಡಿದ ಎಂಬ ಆರೋಪ ಆಶಿಶ್‌ ಮೇಲಿದೆ. ಪ್ರಕರಣ ಸಂಬಂಧ ಫೆಬ್ರುವರಿಯಲ್ಲಿ ಲಖನೌ ಪೀಠದ ಅಲಹಾಬಾದ್‌ ಹೈಕೋರ್ಟ್‌ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಬಳಿಕ ಸುಪ್ರೀಂಕೋರ್ಟ್‌ ಜಾಮೀನನ್ನು ರದ್ದು ಮಾಡಿತ್ತು.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದ ಲಖಿಂಪುರ ಖೇರಿ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿ ಒಟ್ಟು 8 ಮಂದಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.