ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ವರಿಷ್ಠ ಲಾಲು ಪ್ರಸಾದ್ ಪುತ್ರಿ, ಸಂಸದೆ ಮೀಸಾ ಭಾರತಿ ಶನಿವಾರ ನವದೆಹಲಿಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಕಚೇರಿ ಎದುರು ಹಾಜರಾಗಿ ವಿಚಾರಣೆ ಎದುರಿಸಿದರು ಎಂದು ಅಧಿಕಾರಿಗಳು ತಿಳಿಸಿದರು.
ಇದೇ ಪ್ರಕರಣದಲ್ಲಿ ಮೀಸಾ ಭಾರತಿ ಸಹೋದರ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಸಹ ಶನಿವಾರ ಸಿಬಿಐ ಎದುರು ಹಾಜರಾಗಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಲಾಲು ಪ್ರಸಾದ್ ಮತ್ತು ಅವರ ಪತ್ನಿ ರಾಬ್ಡಿ ದೇವಿ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿತ್ತು. ಆರ್ಜೆಡಿ ವರಿಷ್ಠರ ಕುಟುಂಬಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ಇ.ಡಿ ಶೋಧ ನಡೆಸಿತ್ತು. ಬಳಿಕ ದಾಖಲೆ ಇಲ್ಲದ ₹ 1 ಕೋಟಿ ನಗದು ಜಪ್ತಿ ಮಾಡಿದ್ದು,
₹ 600 ಕೋಟಿ ಅಕ್ರಮ ವಹಿವಾಟು ನಡೆಸಿರುವುದನ್ನು ಪತ್ತೆ ಹಚ್ಚಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಹೇಳಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.