ADVERTISEMENT

ಭೂಕುಸಿತ: ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್

ಪಿಟಿಐ
Published 21 ಏಪ್ರಿಲ್ 2023, 10:34 IST
Last Updated 21 ಏಪ್ರಿಲ್ 2023, 10:34 IST
.
.   

ಗೋಪೇಶ್ವರ, ಉತ್ತರಾಖಂಡ: ಹಿಮಪಾತ ಮತ್ತು ಮಳೆಯ ಪರಿಣಾಮ ಭೂಕುಸಿತ ಸಂಭವಿಸಿದ್ದು, ಹನುಮಾನ್‌ ಛಟ್ಟಿಯಲ್ಲಿರುವ ಬದರಿನಾಥ ರಾಷ್ಟ್ರೀಯ ಹೆದ್ದಾರಿಯು ಬಂದ್‌ ಆಗಿದೆ ಎಂದು ಜಿಲ್ಲಾಡಳಿತ ಶುಕ್ರವಾರ ತಿಳಿಸಿದೆ.

ಗಡಿ ರಸ್ತೆಗಳ ಸಂಸ್ಥೆಯು (ಬಿಆರ್‌ಒ) ಹೆದ್ದಾರಿಯ ಮೇಲೆ ಬಿದ್ದಿರುವ ಕಲ್ಲು ಮತ್ತು ಮಣ್ಣಿನ ರಾಶಿಯನ್ನು ತೆಗೆದು ಸಂಚಾರಕ್ಕೆ ಅನುವು ಮಾಡಿಕೊಡಲು ಯತ್ನಿಸುತ್ತಿದೆ.

ಏ.27ರಿಂದ ಬದರಿನಾಥ ದೇಗುಲಕ್ಕೆ ಭಕ್ತಾದಿಗಳು ಭೇಟಿ ನೀಡಬಹುದಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.