ಶಿಮ್ಲಾ: ಹಿಮಾಚಲ ಪ್ರದೇಶದ ಸೊಲಾನ್ ಜಿಲ್ಲೆಯ ಪಟ್ಟಣವೊಂದರ ಹೋಟೆಲ್ ಸಮೀಪ ಮಂಗಳವಾರ ಮುಂಜಾನೆ ಭೂಕುಸಿತ ಸಂಭವಿಸಿದ್ದು, ಮೂವರು ವ್ಯಕ್ತಿಗಳು ಮಣ್ಣಿನಡಿ ಸಿಲುಕಿದ್ದಾರೆ.
ಈ ಪೈಕಿ ಒಬ್ಬನನ್ನು ರಕ್ಷಿಸಲಾಗಿದೆ. ಇನ್ನಿಬ್ಬರಿಗಾಗಿ ಶೋಧಕಾರ್ಯ ಮುಂದುವರಿದಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿ ತಿಳಿಸಿದ್ದಾರೆ. ಜಿಲ್ಲಾಡಳಿತ ಮತ್ತು ಪೊಲೀಸರು ಘಟನಾ ಸ್ಥಳದಲ್ಲಿದ್ದಾರೆ.
ಸೊಲಾನ್ ಜಿಲ್ಲೆಯ ಕಸೌಲಿ ಉಪ ವಲಯದ ಪರ್ವಾನೂ ಪಟ್ಟಣದಸೆಕ್ಟರ್ 3 ನಲ್ಲಿರುವ ಹೋಟೆಲ್ ಸಮೀಪದಲ್ಲಿ ಮುಂಜಾನೆ 2.30ರ ವೇಳೆಯಲ್ಲಿ ಭೂಕುಸಿತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.