ADVERTISEMENT

ಉಗ್ರರು ನುಸುಳಿರುವ ಶಂಕೆ: ತಮಿಳುನಾಡಿನಲ್ಲಿ ಕಟ್ಟೆಚ್ಚರ

ಪಿಟಿಐ
Published 23 ಆಗಸ್ಟ್ 2019, 20:15 IST
Last Updated 23 ಆಗಸ್ಟ್ 2019, 20:15 IST
ಕೊಯಮತ್ತೂರಿನ ದೇವಾಲಯವೊಂದಕ್ಕೆ ಶುಕ್ರವಾರ ಬಿಗಿಭದ್ರತೆ ಒದಗಿಸಲಾಗಿತ್ತು   –ಪಿಟಿಐ ಚಿತ್ರ
ಕೊಯಮತ್ತೂರಿನ ದೇವಾಲಯವೊಂದಕ್ಕೆ ಶುಕ್ರವಾರ ಬಿಗಿಭದ್ರತೆ ಒದಗಿಸಲಾಗಿತ್ತು   –ಪಿಟಿಐ ಚಿತ್ರ   

ಕೊಯಮತ್ತೂರು/ಚೆನ್ನೈ: ಲಷ್ಕರ್‌ ಎ ತಯಬಾ (ಎಲ್‌ಇಟಿ) ಉಗ್ರರು ನುಸುಳಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿರುವ ಕಾರಣ ತಮಿಳುನಾಡಿನಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಕೊಯಮತ್ತೂರಿನಲ್ಲಿ ಹೈಅಲರ್ಟ್‌ ಘೋಷಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಸುಮಿತ್‌ ಶರಣ್‌ ಹೇಳಿದ್ದಾರೆ.

ಎಲ್‌ಇಟಿಯ ಆರು ಮಂದಿ ಉಗ್ರರು ಶ್ರೀಲಂಕಾದಿಂದ ಕಡಲಿನ ಮಾರ್ಗವಾಗಿ ರಾಜ್ಯಕ್ಕೆ ನುಸುಳಿದ್ದು, ವಿವಿಧ ನಗರಗಳಿಗೆ ತೆರಳಿರುವ ಸಾಧ್ಯತೆ ಇದೆ ಎಂಬ ಮಾಹಿತಿ ಬಂದಿರುವ ಕಾರಣ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ರಾಜ್ಯದಾದ್ಯಂತ ವಿಮಾನನಿಲ್ದಾಣ, ರೈಲು ನಿಲ್ದಾಣ, ಬಸ್‌ ನಿಲ್ದಾಣ ಮತ್ತು ಆರಾಧನಾಲಯಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.