ADVERTISEMENT

ಪ್ರತಿಭಟನೆ ನಡೆಸಿದ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿ ಪ್ರಹಾರ

​ಪ್ರಜಾವಾಣಿ ವಾರ್ತೆ
Published 10 ಜನವರಿ 2020, 2:42 IST
Last Updated 10 ಜನವರಿ 2020, 2:42 IST
ಜೆಎನ್‌ಯು ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದು
ಜೆಎನ್‌ಯು ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದು   

ನವದೆಹಲಿ:ದೆಹಲಿಯ ಮಂಡಿ ಹೌಸ್‌ನಿಂದ ರಾಷ್ಟ್ರಪತಿ ಭವನಕ್ಕೆ ಜೆಎನ್‌ಯು ವಿದ್ಯಾರ್ಥಿಗಳು ಕೈಗೊಂಡ ಬೃಹತ್ ಪ್ರತಿಭಟನಾ ಮೆರವಣಿಗೆ ವೇಳೆ ದೆಹಲಿ ಪೊಲೀಸರು ಲಾಠಿ ಪ್ರಹಾರ ಮಾಡಿದ್ದು, ಪ್ರತಿಭಟನಕಾರರನ್ನುವಶಕ್ಕೆ ತೆಗೆದುಕೊಂಡಿದ್ದಾರೆ.

ಘೋಷಣೆ ಕೂಗುತ್ತಾ ರಾಷ್ಟ್ರಪತಿ ಭವನದತ್ತ ಹೊರಟವಿದ್ಯಾರ್ಥಿಗಳನ್ನು ಪೊಲೀಸರು ಎಳೆದು ಬಸ್‌ಗೆ ತುಂಬಿದ್ದಾರೆ.ಲಾಠಿ ಪ್ರಹಾರದಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ಗಾಯವಾಗಿದ್ದು, ಪ್ರತಿಭಟನಕಾರರನ್ನು ಮೂರು ಬಸ್‌ಗಳಲ್ಲಿ ತುಂಬಿ ಪೊಲೀಸರು ಕರೆದೊಯ್ದಿದ್ದಾರೆ.

ಹಿರಿಯ ರಾಜಕಾರಣಿಗಳಾದ ಸೀತಾರಾಂ ಯೆಚೂರಿ, ಡಿ. ರಾಜಾ, ಪ್ರಕಾಶ್ ಕಾರಾಟ್, ಬೃಂದಾ ಕಾರಾಟ್ ಮತ್ತು ಶರದ್ ಯಾದವ್ ಮೊದಲಾದವರು ವಿದ್ಯಾರ್ಥಿಗಳ ಪ್ರತಿಭಟನೆಗೆ ಸಾಥ್ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.