ADVERTISEMENT

ಏಕಕಾಲಕ್ಕೆ ಚುನಾವಣೆ: ಅ.25ರಂದು ಕಾನೂನು ಆಯೋಗದಿಂದ ಮಾಹಿತಿ ಸಲ್ಲಿಕೆ

ಪತ್ರ ಬರೆದಿದ್ದ ಮಾಜಿ ರಾಷ್ಟ್ರಪತಿ ಕೋವಿಂದ ನೇತೃತ್ವದ ಉನ್ನತ ಸಮಿತಿ

ಪಿಟಿಐ
Published 20 ಅಕ್ಟೋಬರ್ 2023, 14:14 IST
Last Updated 20 ಅಕ್ಟೋಬರ್ 2023, 14:14 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಗಳ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವುದಕ್ಕೆ ಸಂಬಂಧಿಸಿದಂತೆ ತಾನು ಸಿದ್ಧಪಡಿಸಿರುವ ಯೋಜನೆ ಕುರಿತ ಮಾಹಿತಿಯನ್ನು ಕಾನೂನು ಆಯೋಗವು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಅ.25ರಂದು ಸಲ್ಲಿಸಲಿದೆ.

ಏಕಕಾಲಕ್ಕೆ ಚುನಾವಣೆಗಳನ್ನು ನಡೆಸುವ ಕುರಿತು ಅಭಿಪ್ರಾಯಗಳನ್ನು ತಿಳಿಸುವಂತೆ ಸಮಿತಿಯು ಆಯೋಗವನ್ನು ಕೋರಿತ್ತು.

ADVERTISEMENT

ಇತ್ತೀಚೆಗೆ ಮೊದಲ ಸಭೆ ನಡೆಸಿದ್ದ ಕೋವಿಂದ ನೇತೃತ್ವದ ಉನ್ನತ ಸಮಿತಿಯು, ಈ ವಿಚಾರವಾಗಿ ಎಲ್ಲ ರಾಜಕೀಯ ಪಕ್ಷಗಳ ಅಭಿಪ್ರಾಯಗಳನ್ನು ಕೇಳಲು ನಿರ್ಧರಿಸಿತ್ತು. ಅದರಂತೆ, ಅಭಿಪ್ರಾಯಗಳನ್ನು ತಿಳಿಸುವಂತೆ ಅವುಗಳಿಗೆ ಪತ್ರವನ್ನು ಬರೆದು, ಎಲ್ಲರಿಗೂ ಒಪ್ಪಿಗೆಯಾಗುವ ದಿನದಂದು ‌ಸಂವಾದ ನಡೆಸಲು ಇಚ್ಛಿಸಿದ್ದಾಗಿ ತಿಳಿಸಿದೆ ಎಂದು ಮೂಲಗಳು ಹೇಳಿವೆ.

ಅಲ್ಲದೇ, ರಾಜಕೀಯ ಪಕ್ಷಗಳು ಮುಂದಿನ ಮೂರು ತಿಂಗಳೊಳಗಾಗಿ ತಮ್ಮ ಅಭಿಪ್ರಾಯಗಳನ್ನು ಲಿಖಿತವಾಗಿ ಸಲ್ಲಿಸುವ ಆಯ್ಕೆಯನ್ನು ಕೂಡ ಸಮಿತಿ ನೀಡಿದೆ ಎಂದು ಇವೇ ಮೂಲಗಳು ಹೇಳಿವೆ.

ವಿಧಾನಸಭೆಗಳ ಅವಧಿಯನ್ನು ವಿಸ್ತರಿಸುವುದು ಅಥವಾ ಕಡಿಮೆ ಮಾಡುವ ಮೂಲಕ 2029ರ ನಂತರ ಲೋಕಸಭಾ ಚುನಾವಣೆಯೊಂದಿಗೆ ವಿಧಾನಸಭೆಗಳ ಚುನಾವಣೆ ನಡೆಸುವುದಕ್ಕೆ ಸಂಬಂಧಿಸಿದ ಸೂತ್ರವೊಂದನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ನಿವೃತ್ತ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ನೇತೃತ್ವದ ಕಾನೂನು ಆಯೋಗವು ಯೋಜನೆ ರೂಪಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.